Breaking News

ಪ್ರಯಾಣಿಕರಿಗೆ ಬಿಗ್ ಶಾಕ್ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತೆ ‘KSRTC’ ನೌಕರರ ಪ್ರತಿಭಟನೆ..!

Spread the love

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ಮತ್ತೆ ಪ್ರಯಾಣಿಕರಿಗೆ ಬಸ್ ಮುಷ್ಕರದ ಬಿಸಿ ತಟ್ಟಲಿದೆ ಎನ್ನಲಾಗಿದೆ.

ಹೌದು, ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಲು ಮುಂದಾಗಿದ್ದು, ವಿವಿಧ ಬೇಡಿಕೆಗಳೊಂದಿಗೆ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ನಾಲ್ಕು ನಿಗಮದ ಸಾವಿರಾರು ನೌಕರರು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ವೈದ್ಯಕೀಯ ಸೌಲಭ್ಯ , ಗ್ರಾಚ್ಯೂಟಿ ಹಣ, KSRTC ಖಾಸಗೀಕರಣ ಸೇರಿ ಹಲವು ವಿಚಾರಕ್ಕೆ ‘KSRTC’ ನೌಕರರು ಮತ್ತೆ ಪ್ರತಿಭಟನೆಗೆ ನಡೆಸಲು ಸಜ್ಜಾಗಿದ್ದಾರೆ. ಹಾಗೂ ಇದುವರೆಗೆ ಕೊರೊನಾದಿಂದ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ಪರಿಹಾರ ನೀಡದ ಸರ್ಕಾರದ ವಿರುದ್ಧ ನೌಕರರು ಪ್ರತಿಭಟಿಸಲಿದ್ದಾರೆ. ಕಳೆದ ಬಾರಿ ಕೆ ಎಸ್ ಆರ್ ಟಿ ಸಿ ಬಸ್ ನೌಕರರು ವಾರಗಟ್ಟಲೇ ಪ್ರತಿಭಟನೆ ನಡೆಸಿದ್ದು, ಇದರಿಂದ ಪ್ರಯಾಣಿಕರು ಭಾರೀ ತೊಂದರೆ ಅನುಭವಿಸಿದ್ದರು. ಮತ್ತೆ ಬಸ್ ಸಂಚಾರ ಬಂದ್ ಆದ್ರೆ ವಿದ್ಯಾರ್ಥಿಗಳು, ಜನ ಸಾಮಾನ್ಯರು, ಮತ್ತೆ ತೊಂದರೆ ಅನುಭವಿಸಲಿದ್ದಾರೆ.


Spread the love

About Laxminews 24x7

Check Also

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

Spread the loveಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ