Home / ರಾಜಕೀಯ / ಗಡಿ ವಿವಾದದ ಕಿಚ್ಚು ಹೊತ್ತಿರುವಾಗಲೇ ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಿದ ಮಹಾರಾಷ್ಟ್ರದ ಎನ್ ಸಿಪಿ‌ ಶಾಸಕ ರೋಹಿತ್ ಪವಾರ್

ಗಡಿ ವಿವಾದದ ಕಿಚ್ಚು ಹೊತ್ತಿರುವಾಗಲೇ ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಿದ ಮಹಾರಾಷ್ಟ್ರದ ಎನ್ ಸಿಪಿ‌ ಶಾಸಕ ರೋಹಿತ್ ಪವಾರ್

Spread the love

ಗಡಿ ವಿವಾದದ ಕಿಚ್ಚು ಹೊತ್ತಿರುವಾಗಲೇ ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಿದ ಮಹಾರಾಷ್ಟ್ರದ ಎನ್ ಸಿಪಿ‌ ಶಾಸಕ ರೋಹಿತ್ ಪವಾರ್ ಜಿಲ್ಲಾಡಳಿತಕ್ಕೆ ಟಾಂಗ್ ನೀಡಿದ್ದಾರೆ.

ಮಂಗಳವಾರ ನಗರದ ವಿವಿಧ ಪ್ರದೇಶಕ್ಕೆ‌ ತೆರಳಿ ಮರಾಠಿ ಸಮಾಜದ ಸಮಸ್ಯೆ ಆಲಿಸಿದ ಎನ್ ಸಿಪಿ ಶಾಸಕ ರೋಹಿತ್ ಎಂಇಎಸ್ ಮುಖಂಡ ದೀಪಕ ದಳವಿ ಮನೆಗೆ ತೆರಳಿ ಮಾತುಕತೆ ನಡೆಸಿದರು. ಇದಕ್ಕೂ‌ ಮೊದಲು ಹುತಾತ್ಮ ಚೌಕ ಬಳಿ ಬಂದು ಎಂಇಎಸ್ ನಾಯಕರನ್ನು ಭೇಟಿಯಾದರು.

ಬಳಿಕ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ನನಗೂ ಹಾಗೂ ಬೆಳಗಾವಿಗೂ ಅವಿನಾಭಾವ ಸಂಬಂಧ ಇದೆ. ನಾನು ಮಹಾರಾಷ್ಟ್ರದಿಂದ ಯಾವುದೇ ಅಡ್ಡ ದಾರಿಯಿಂದ ಬಂದಿಲ್ಲ‌. ನೇರವಾಗಿ ಬಂದಿದ್ದೇನೆ. ಬೆಳಗಾವಿಲ್ಲಿರುವ ಮರಾಠಿ ಭಾಷಿಕರ ಸಮಸ್ಯೆಯನ್ನು ಬಗೆ ಹರಿಸಲು ಮಹಾರಾಷ್ಟ್ರ ಸದನದಲ್ಲಿ ಚರ್ಚೆ ನಡೆಸುವೆ ಎಂದರು.


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ