Breaking News

ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಚರ್ಮಗಂಟು (ಲಂಪಿಸ್ಕಿನ್‌) ರೋಗ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ. ಆದರೆ, ಬಹುಪಾಲು ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೆಲವರಿಗೆ ಮಾತ್ರ ಅಲ್ಪಮೊತ್ತದ ಹಣ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.

 

‘ಚರ್ಮಗಂಟು ರೋಗ ಶಾಪವಾಗಿ ಪರಿಣಮಿಸಿದೆ. ಈ ಸೋಂಕಿನಿಂದ ಮೃತಪಟ್ಟಿರುವ 1 ವರ್ಷದೊಳಗಿನ ಕರುವಿಗೆ ತಲಾ ₹5 ಸಾವಿರ, ಆಕಳಿಗೆ ₹20 ಸಾವಿರ ಮತ್ತು ಎತ್ತಿಗೆ ₹30 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ. ಇದು ಏತಕ್ಕೂ ಸಾಲದು. ಮೇಲಾಗಿ, ಆ ಪರಿಹಾರವೂ ಇನ್ನೂ ಸಿಕ್ಕಿಲ್ಲ’ ಎಂದು ತಾಲ್ಲೂಕಿನ ಗಣಿಕೊಪ್ಪದ ರೈತರಾದ ಅಭಿಷೇಕ ಹಿರೇಮಠ, ಶಿವಲಿಂಗ ಗಾಬಿ, ಸಿದ್ಧನಗೌಡ ಪಾಟೀಲ  ಅಳಲು
ತೋಡಿಕೊಂಡರು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ