ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಶಂಕ್ರಪ್ಪ ಮಹಾದೇವಪ್ಪ ಕಳಸಗೌಂಡ ಎಂಬುವರ ಎರಡು ಎಕರೆ ಕಬ್ಬು ಭಸ್ಮವಾಗಿದೆ.
ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು ಎರಡು ಲಕ್ಷ ಮೌಲ್ಯದ ಕಬ್ಬು ಭಸ್ಮವಾಗಿದೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಈ ಕುರಿತು ದೂರು ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.