Breaking News

ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾವುದೇ ಚರ್ಚೆ ಆಗಿಲ್

Spread the love

ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್ಸಿನ ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಮ್ಮ ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ತಿಳಿಸಿದ್ರು.

ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆ ಆಗುವುದಿಲ್ಲ. ಜಿಲ್ಲಾ, ರಾಜ್ಯ, ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡೇ ಮಾಡ್ತಾರೆ‌. ನಾನು ಇದೇ ಜಿಲ್ಲೆಯ‌ ಜನಪ್ರತಿನಿಧಿ, ನನ್ನ ಗಮನಕ್ಕೆ ಬಂದಿಲ್ಲ. ಬಿಜೆಪಿ ಕೇಡರ್ ಬೇಸ್ ಪಾರ್ಟಿ ಸ್ಥಳೀಯ ನಾಯಕರೇ ಅವರನ್ನ ರಾಷ್ಟ್ರೀಯ ನಾಯಕರನ್ನ ಭೇಟಿ ಮಾಡಿಸಬೇಕು. ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ನಂಗೇ ಏನೂ ಗೊತ್ತಿಲ್ಲ ಎಂದರು.

ಇನ್ನು ಹು-ಧಾ ಐಪಿಎಸ್ ಅಧಿಕಾರಿಗಳ ಕೋಲ್ಡ್ ವಾರ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಈ ವಿಚಾರ ನನ್ನ ಗಮನಕ್ಕೂ ಬಂದಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಹೀಗಾಗಿ ನಾನು ಅಧಿಕಾರಿಗಳಿಬ್ಬರ ಜೊತೆ ಮಾತನಾಡುತ್ತೇನೆ. ಅಲ್ಲದೇ ಗೃಹ ಸಚಿವರ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ