Breaking News

ಬಿಸಿಯೂಟ ಅಡುಗೆ ಸಿಬಂದಿಗೂ ವಿಶೇಷ ತರಬೇತಿಗೆ ಇಲಾಖೆ ಸಿದ್ಧತೆ

Spread the love

ದಾವಣಗೆರೆ: ರಾಜ್ಯ ಸರಕಾರದ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಹಾಗೂ ಸಾಮಾಜಿಕ ಪರಿಶೋಧನ ನಿರ್ದೇಶನಾಲಯವು ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಗೆ ಸಂಬಂಧಿಸಿ ಶುಚಿತ್ವ-ವ್ಯವಸ್ಥಿತ ನಿರ್ವಹಣೆ ಕುರಿತು ನೀಡಿದ ಮಹತ್ವದ ಶಿಫಾರಸುಗಳಿಗೆ ಪೂರಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲ ಶಾಲೆಗಳ ಬಿಸಿಯೂಟ ಯೋಜನೆಯ ಅಡುಗೆ ಸಿಬಂದಿಗೆ ವಿಶೇಷ ತರಬೇತಿ ನೀಡಲು ಮುಂದಾಗಿದೆ.

 

ಶಾಲಾ ಅಡುಗೆ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬಂದಿಗೆ ಪ್ರಸಕ್ತ ತಿಂಗಳಲ್ಲೇ ಒಂದು ದಿನದ ತರಬೇತಿ ನೀಡಲು ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ. ತರಬೇತಿಯನ್ನು ತಾಲೂಕು ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಇದಕ್ಕಾಗಿ ಒಬ್ಬರಿಗೆ ದಿನಕ್ಕೆ 100 ರೂ. ವೆಚ್ಚ ಭರಿಸಲು ಅಕ್ಷರ ದಾಸೋಹ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಅಡುಗೆ ಸಿಬಂದಿಯ ನಿರ್ದಿಷ್ಟ ಕೆಲಸಗಳು ಹಾಗೂ ಪಡೆಯುವ ಸೌಲಭ್ಯಗಳ ಬಗ್ಗೆ ಪರಿಚಯಿಸಿ ಕೊಡಬೇಕು. ಅಡುಗೆ ಕೇಂದ್ರಗಳಲ್ಲಿ ಸ್ವತ್ಛತೆ, ನೈರ್ಮಲ್ಯ ಮತ್ತು ಸುರಕ್ಷತ ಕ್ರಮಗಳ ಅರಿವು ಹಾಗೂ ನಿರ್ವಹಣೆಯ ಬಗ್ಗೆ ಮಾರ್ಗದರ್ಶನ ನೀಡಬೇಕು ಸೇರಿದಂತೆ ಅಡುಗೆ ಹಾಗೂ ಅಡುಗೆ ಕೇಂದ್ರದ ನಿರ್ವಹಣೆ ಬಗ್ಗೆ ವಿವಿಧ ವಿಷಯಗಳ ಕುರಿತು ತಜ್ಞರಿಂದ ಅನುಭವಿಗಳಿಗೆ ಉಪನ್ಯಾಸ, ಪ್ರಾತ್ಯಕ್ಷಿಕೆ ಮೂಲಕ ತರಬೇತಿಯಲ್ಲಿ ತಿಳಿವಳಿಕೆ ನೀಡಲಾಗುತ್ತದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ