Breaking News

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

Spread the love

ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾನೆ ಪೊಲೀಸರು ಬಂಧಿಸಿದ್ದಾರೆ.

 

 

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ಆರೋಪದ ಹಿನ್ನೆಲೆಯಲ್ಲಿ ನವೆಂಬರ್ 9 ರಂದು ಬಸವರಾಜನ್, ಸೌಭಗ್ಯ ವಿರುದ್ಧ ದೂರು ದಾಖಲಾಗಿತ್ತು. ನವೆಂಬರ್ 10 ರಂದು ಬಸವರಾಜನ್ ರನ್ನು ಬಂಧಿಸಲಾಗಿತ್ತು. ಸೌಭಾಗ್ಯ ತಲೆಮರೆಸಿಕೊಂಡಿದ್ದರು.

ನಿನ್ನೆ ತಡರಾತ್ರಿ ದಾವಣಗೆರೆಯಲ್ಲಿ ಸೌಭಗ್ಯ ಬಸವರಾಜನ್ ರನ್ನು ಬಂಧಿಸಲಾಗಿದೆ. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ