ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಸಂಭ್ರಮಕ್ಕೆ ಹುಬ್ಬಳ್ಳಿಯ ಜನರು ಶಾಕ್ ನೀಡಿದ್ದಾರೆ. 30 ವರ್ಷ ಅಧಿಕಾರ ಅನುಭವಿಸಿ, ಮುಖ್ಯಮಂತ್ರಿ, ಸಚಿವರಾಗಿದ್ದ ಶೆಟ್ಟರ್ ಅವರಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಇರುವ ಸಾಲು ಸಾಲು ಸಮಸ್ಯೆಗೆ ಪರಿಹಾರ ನೀಡುವಂತೆ ಜನತೆ ಒತ್ತಾಯಿಸಿದ್ದಾರೆ.
ಹುಟ್ಟು ಹಬ್ಬದ ಶುಭಾಶಯ ಕೋರಿ ತಮ್ಮ ಬೇಡಿಕೆ ಈಡೇರಿಸಿ ಉಡುಗೊರೆ ನೀಡುವಂತೆ ಮನವಿ ಮಾಡಿದ್ದಾರೆ.
ಸ್ವ ಹಿತಾಸಕ್ತಿಗೆ ಬಿ.ಆರ್.ಟಿ.ಎಸ್ ಯೋಜನೆ ತಂದು ನಮ್ಮ ಜೀವ ತೆಗೆಯುತ್ತಿದ್ದಾರೆ.
ಕಸದ ನಿರ್ವಹಣೆ ಆಗುತ್ತಿಲ್ಲ, ಕುಡಿಯುವ ನೀರು ದೊರೆಯುತ್ತಿಲ್ಲ, ರಸ್ತೆ ಗುಂಡಿ ಮುಚ್ಚುತ್ತಿಲ್ಲ ಇಂತಹ ಅನೇಕ ಸಮಸ್ಯೆಗಳಿವೆ. ನಿಮ್ಮ ಹುಟ್ಟು ಹಬ್ಬದ ಸಂಭ್ರಮಕ್ಕಾದರೂ ಇಂತಹ ಸಮಸ್ಯೆ ಬಗೆಹರಿಸಿ ಎಂದು ಸಾರ್ವಜನಿಕರು ಶೆಟ್ಟರ್ ಅನುಪಸ್ಥಿತಿಯಲ್ಲಿ ಆಪ್ತರಿಗೆ ಮನವಿ ಮಾಡಿದ್ದಾರೆ.
Laxmi News 24×7