ಬೆಳಗಾವಿ: ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಇಂದು ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ.
ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಮಹಾಮೇಳಾವ್ ವೇದಿಕೆಯನ್ನು ತೆರವುಗೊಳಿಸಲಾಯಿತು. ಎಡಿಜಿಪಿ ಅಲೋಕ ಕುಮಾರ್ ಹಾಗೂ ಬೆಳಗಾವಿ ನಗರ ಡಿಸಿಪಿ ರವೀಂದ್ರ ಗಡಾದಿ ಸ್ಥಳಕ್ಕೆ ಭೇಟಿ ನೀಡಿ ವೇದಿಕೆಯನ್ನು ತೆರವುಗೊಳಿಸಿದರು. ಯಾವುದೇ ಸಭೆ ಸಮಾರಂಭ ಆಯೋಜಿಸದಂತೆ ತಾಕೀತು ಮಾಡಿದರು.
ನಗರದ ಹಲವು ಪ್ರದೇಶಗಳಲ್ಲಿ ಸೋಮವಾರ ಕಲಾಂ 144 ನಿಷೇಧಾಜ್ಞೆ ಜಾರಿ ಮಾಡಿದ್ದರಿಂದ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ. ಹೀಗಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವಕ್ಕೆ ಬ್ರೇಕ್ ಬಿದ್ದಂತಾಗಿದೆ.
Laxmi News 24×7