Breaking News

ಮರಾಠಿ ಮಹಾಮೇಳಾವ್ ಗೆ ಅನುಮತಿ ನಿರಾಕರಣೆ: ವೇದಿಕೆ ತೆರವುಗೊಳಿಸಿದ ಅಲೋಕ ಕುಮಾರ್

Spread the love

ಬೆಳಗಾವಿ: ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಇಂದು ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ.

 

ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಮಹಾಮೇಳಾವ್ ವೇದಿಕೆಯನ್ನು ತೆರವುಗೊಳಿಸಲಾಯಿತು. ಎಡಿಜಿಪಿ ಅಲೋಕ ಕುಮಾರ್ ಹಾಗೂ ಬೆಳಗಾವಿ ನಗರ ಡಿಸಿಪಿ ರವೀಂದ್ರ ಗಡಾದಿ ಸ್ಥಳಕ್ಕೆ ಭೇಟಿ ನೀಡಿ ವೇದಿಕೆಯನ್ನು ತೆರವುಗೊಳಿಸಿದರು. ಯಾವುದೇ ಸಭೆ ಸಮಾರಂಭ ಆಯೋಜಿಸದಂತೆ ತಾಕೀತು ಮಾಡಿದರು.

ನಗರದ ಹಲವು ಪ್ರದೇಶಗಳಲ್ಲಿ ಸೋಮವಾರ ಕಲಾಂ 144 ನಿಷೇಧಾಜ್ಞೆ ಜಾರಿ ಮಾಡಿದ್ದರಿಂದ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ. ಹೀಗಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವಕ್ಕೆ ಬ್ರೇಕ್ ಬಿದ್ದಂತಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ