Breaking News

ಮಹಾ ಅಧಿವೇಶನದಲ್ಲಿ ಬೆಳಗಾವಿ ವಿವಾದ ಪ್ರತಿಧ್ವನಿಸುವ ನಿರೀಕ್ಷೆ

Spread the love

ಮುಂಬೈ: ಸೋಮವಾರದಿಂದ ನಾಗ್ಪುರದಲ್ಲಿ ಆರಂಭವಾಗಲಿರುವ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರ ಹೇಳಿಕೆ ಪ್ರತಿಧ್ವನಿಸುವ ನಿರೀಕ್ಷೆ ಇದೆ.

 

“ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗುವುದು,’ ಎಂದು ಡಿಸಿಎಂ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಇದೇ ವೇಳೆ, “ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ನಡೆಸಿರುವ ಮಾತುಕತೆಯನ್ನು ಸಾರ್ವಜನಿಕಗೊಳಿಸಬೇಕು,’ ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕ ಅಜಿತ್‌ ಪವಾರ್‌ ಒತ್ತಾಯಿಸಿದ್ದಾರೆ. ಡಿ.30ರವರೆಗೆ ಅಧಿವೇಶನ ನಡೆಯಲಿದೆ.

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುತ್ತಾರೆ. ಆದರೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಾರೆ. ಇದು ಒಳ್ಳೆಯ ರಾಜಕಾರಣಿಯ ಲಕ್ಷಣವಲ್ಲ.
– ಸಂಜಯ್‌ ರಾವತ್‌, ಶಿವಸೇನೆ ಸಂಸದ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ