ಚಿಕ್ಕೋಡಿ: ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022ರ ಜಂಟಿ ಸಮಿತಿಯ ಸದಸ್ಯರಾಗಿ ಚಿಕ್ಕೋಡಿ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ.
ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯಲ್ಲಿ ಬಹುರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ,-2022 ಕಾಯ್ದೆಯಲ್ಲಿ ಲೋಕಸಭಾ ಸದಸ್ಯರನ್ನುಳಗೊಂಡಿರುವ ಹಾಗೂ ರಾಜ್ಯ ಸಭಾ ಸದಸ್ಯರ ಜಂಟಿ ಸಮಿತಿಯ ರಚನೆಯಲ್ಲಿ ಚಿಕ್ಕೋಡಿಯ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಆಯ್ಕೆಯಾಗಿದ್ದಾರೆ.
ಈ ಸಮಿತಿಯ ಅಧ್ಯಕ್ಷರು ಸಮಿತಿಯ ಸದಸ್ಯರಲ್ಲಿ ಒಬ್ಬರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.