Breaking News
Home / ರಾಜಕೀಯ / ದೇಗುಲಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶಕ್ಕೆ ಶಿಫಾರಸು

ದೇಗುಲಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶಕ್ಕೆ ಶಿಫಾರಸು

Spread the love

ಸುವರ್ಣ ವಿಧಾನಸೌಧ: ರಾಜ್ಯ ಮುಜರಾಯಿ ದೇವಸ್ಥಾನಗಳ ಪ್ರವೇಶ ದ್ವಾರದಲ್ಲಿ ದೇವಸ್ಥಾನದ ಒಳಗೆ ಎಲ್ಲ ಜಾತಿಯವರಿಗೂ ಮುಕ್ತ ಅವಕಾಶ ಇರುತ್ತದೆ ಎಂಬ ಬೋರ್ಡ್‌ ಅಳವಡಿಸುವ ಮೂಲಕ ಎಲ್ಲರಿಗೂ ದೇವಸ್ಥಾನದ ಒಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 6ನೇ ವರದಿಯಲ್ಲಿ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ.

ಮಂಗಳವಾರ ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ವರದಿಯನ್ನು ಮಂಡಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಹಾಗೂ ಇತರೆ ಜನಾಂಗದವರು ಶಾಂತಿ ಸೌಹಾರ್ದತೆಯಿಂದ ಇರಲು ಆಯಾ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿದಾಗ ದಲಿತರ ಮನೆಗೆ ಹೋಗಿ ಅರಿವು ಮೂಡಿಸುವ ಕೆಲಸ ಆಗಬೇಕು. ಈ ಮೂಲಕ ಜಿಲ್ಲಾಡಳಿತ ಪರಿಶಿಷ್ಟರ ಸಹಕಾರಕ್ಕೆ ಬರಲಿದೆ ಎಂಬ ಜಾಗೃತಿ ಮೂಡಿಸುವ ಅಗತ್ಯವಿದೆ. ಅತಿ ಸೂಕ್ಷ್ಮ ಪ್ರದೇಶಗಳಾದ ಗ್ರಾಮಗಳಿಗೆ ಪೊಲೀಸರು ಆಗಾಗೆ ಭೇಟಿ ನೀಡಬೇಕು. ಗ್ರಾಮದ ಜನರಲ್ಲಿ ವಿಶ್ವಾಸ ಮೂಡಿಸುವ ಜತೆಗೆ ಪರಿಶಿಷ್ಟರು ಹಾಗೂ ಸಾಮಾನ್ಯರ ನಡುವೆ ಸೌಹಾರ್ದ ಜೀವನ ಸಾಗಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಸುವ ನಿಟ್ಟಿನಲ್ಲಿ ಪೊಲೀಸ್‌ ಠಾಣೆಗಳಿಂದ ಅತ್ಯಂತ ಸೂಕ್ಷ್ಮ ಪ್ರದೇಶದ ಗ್ರಾಮಗಳಿಗೆ ಆಗಾಗೆ ಗಸ್ತು ನಡೆಸುತ್ತಿರಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ