Breaking News

ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು: ಬಸವರಾಜ ಹೊರಟ್ಟಿ

Spread the love

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

 

ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಯ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆ ಮೀಸಲು ಇಡಲಾಗುತ್ತದೆ. ಮಂಗಳವಾರ- ಬುಧವಾರ ಎರಡು ದಿನ ಉ.ಕ ವಿಚಾರ ಚರ್ಚೆ ಮಾಡಲಾಗುತ್ತದೆ. ಸದನ ಆರಂಭವಾದ ತಕ್ಷಣ ಚರ್ಚೆ ಗೆ ಸಂಬಂಧಿಸಿದ ಸಚಿವರು ಇರಬೇಕು. ಇರಲಿಲ್ಲ ಅಂದರೆ ಸಿಎಂ ಅವರಿಗೆ ಉತ್ತರಿಸಲು ಸೂಚಿಸುತ್ತೇನೆ ಎಂದರು.

 

ಕನಿಷ್ಠ 15 ದಿನ ಅಧಿವೇಶನ ನಡೆಸಬೇಕು. ಸರ್ಕಾರ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಅನಗತ್ಯ ಗದ್ದಲ- ಗಲಾಟೆಗೆ ಕಾಲಹರಣಕ್ಕೆ ಅವಕಾಶ ಕೊಡುವುದಿಲ್ಲ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ