Breaking News
Home / ರಾಜಕೀಯ / ಸನ್ಯಾಸತ್ವ ಬಿಟ್ಟು ರಾಜಕೀಯಕ್ಕೆ ಬನ್ನಿ: ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಸವಾಲ್

ಸನ್ಯಾಸತ್ವ ಬಿಟ್ಟು ರಾಜಕೀಯಕ್ಕೆ ಬನ್ನಿ: ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಸವಾಲ್

Spread the love

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಅದೇ ಸಮುದಾಯದವರಾದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು ನೇರ ಸವಾಲ್ ಹಾಕಿದ್ದಾರೆ.

ಬಾಗಲಕೋಟೆ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ”ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ.

ಮಾಡಿರುವ ಆರೋಪ ಸಾಬೀತು ಮಾಡಿದ್ರೆ ಇವತ್ತೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ. ಸಾಬೀತು ಮಾಡದೇ ಇದ್ರೆ ನೀವು ಸನ್ಯಾಸತ್ವ ತೊರೆದು ರಾಜಕೀಯಕ್ಕೆ ಬನ್ನಿ” ಎಂದು ಸವಾಲು ಹಾಕಿದರು.

ನಿನ್ನೆ ಸಂದರ್ಶನದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಘೋಷಣೆ ಆಗದೇ ಇರಲು ಬಾಗಲಕೋಟೆ ಜಿಲ್ಲೆಯ ನಮ್ಮ ಸಮಾಜದ ಸಚಿವರು ಕಾರಣ ಎಂದು ಸ್ವಾಮೀಜಿ ಆರೋಪಿಸಿದ್ದಕ್ಕೆ ಸಚಿವ ನಿರಾಣಿ ಗರಂ ಆಗಿದ್ದಾರೆ. .


Spread the love

About Laxminews 24x7

Check Also

ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್

Spread the loveಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ