Home / ರಾಜಕೀಯ / ಅಥಣಿ ಪುರಸಭೆ ಸದಸ್ಯರಿಂದ ಪ್ರತಿಭಟಣೆ

ಅಥಣಿ ಪುರಸಭೆ ಸದಸ್ಯರಿಂದ ಪ್ರತಿಭಟಣೆ

Spread the love

ಅಥಣಿ ಪುರಸಭೆ ಚುನಾವಣೆ ಮುಗಿದು ಇಂದಿಗೆ ವರ್ಷವಾಯ್ತು, ಇದುವರೆಗೂ ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ ಇದರಿಂದ ಪಟ್ಟಣದ ಅಭಿವೃದ್ದಿಗೆ ಹಿನ್ನಡೆಯಾಗುತ್ತಿದೆ. ಸರಕಾರ ಜನತಾ ಜನಾರ್ಧನರಿಗೆ ಮೋಸಮಾಡುತ್ತಿದೆ ಎಂದು ಆರೋಪಿಸಿ ಪುರಸಭೆ ಸದಸ್ಯರು ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಣೆ ಮಾಡಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ಬೆಳಿಗ್ಗೆ ಪ್ರತಿಭಟಣೆ ಮಾಡುತ್ತಾ ಮಾತನಾಡಿದ ಸದಸ್ಯ ರಾವಸಾಬ ಐಹೊಳೆ ಒಂದು ವರ್ಷವಾಯ್ತು ನಾವು ಆಯ್ಕೆಗೊಂಡು ಇದುವರೆಗೂ ಅಧಿಕಾರ ಸಿಕ್ಕಿಲ್ಲ, ಇದರಿಂದ ವಾರ್ಡಗಳಲ್ಲಿ ಯಾವುದೇ ಅಭಿವೃದ್ದಿ ಕಾರ್ಯವಾಗಿಲ್ಲ, ಯಾವ ಯೋಜನೆಗಳೂ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಹಾಗಾಗಿ ಮತಹಾಕಿದ ಜನತೆ ನಮ್ಮನ್ನು ಕೇಳುತ್ತಿದ್ದಾರೆ. ಸರಕಾರವೇ ಈ‌ ಎಲ್ಲ ಸಮಸ್ಯೆಗಳಿಗೆ ನೇರಹೊಣೆ. ನಮ್ಮ ಚುನಾಯಿತ ಪ್ರತನಿಧಿಗಳ ದಿವ್ಯ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಮುಂದುವರೆದಿದ್ದು ಕೂಡಲೇ ಅಧಿಕಾರ ಹಸ್ತಾಂತರವಾಗಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ