ಸಂಘಗಳ ಸಾಲದ ವ್ಯವಹಾರದಲ್ಲಿ ಮಾರ್ಜಿನ್ ಹಣ ಈ ಹಿಂದೆ ಇದ್ದ ಶೇ.3ರಷ್ಟರಂತೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಬ್ಯಾಂಕ್ ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ಸೋಮವಾರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿದರು.
ಸರಕಾರವು ರೈತರ ಸಾಲ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು. ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಲ್ಲಿ ಸಂಘಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಖೋತಾ ಮಾಡಬೇಕು. ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸರಕಾರ ಸಂಘದಲ್ಲಿ ದುಡಿಯುತ್ತಿರುವ ಎಲ್ಲಾ ವರ್ಗದ ನೌಕರರಿಗೆ ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ಜಾರಿಗೆ ತರಲು ನೌಕರರು ರಾಜ್ಯಮಟ್ಟದ ಪ್ರಾಧಿಕಾರ ರಚಿಸಲು ಸರಕಾರ ಕಾಯ್ದೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿದ್ದಾರೆ.