Home / ರಾಜಕೀಯ / Dharwad-Belagavi; ಹೊಸ ರೈಲು ಮಾರ್ಗಕ್ಕೆ ಮೋದಿಯಿಂದ ಶಂಕು ಸ್ಥಾಪನೆ

Dharwad-Belagavi; ಹೊಸ ರೈಲು ಮಾರ್ಗಕ್ಕೆ ಮೋದಿಯಿಂದ ಶಂಕು ಸ್ಥಾಪನೆ

Spread the love

ಧಾರವಾಡ, ಡಿಸೆಂಬರ್ 26; ಬಹುವರ್ಷಗಳ ಬೇಡಿಕೆಯಾದ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ನೇರ ರೈಲು ಮಾರ್ಗ ಯೋಜನೆಗೆ ಇನ್ನೂ ಶಂಕುಸ್ಥಾಪನೆಯಾಗಿಲ್ಲ. ಈ ಯೋಜನೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಬೆಳಗಾವಿ ಸಂಸದ ದಿ. ಸುರೇಶ್ ಅಂಗಡಿ ಕನಸಾಗಿದೆ.

2023ರಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿನೇರ ರೈಲು ಮಾರ್ಗ ಯೋಜನೆಗೆ ಶಂಕು ಸ್ಥಾಪನೆ ನಡೆಯಲಿದೆ.

ಎರಡು ವರ್ಷಗಳ ಹಿಂದೆ ಘೋಷಣೆಯಾದ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬುದು ಜನರ ಆರೋಪವಾಗಿದೆ.

 

2021-22ರ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಗೆ 50 ಕೋಟಿ ಮೀಸಲಾಗಿತ್ತು. ಭೂ ಸ್ವಾಧೀನ ಪ್ರಕ್ರಿಯೆಯ ಸಮಸ್ಯೆಯ ಕಾರಣ ಯೋಜನೆ ಅನುಷ್ಠಾನ ತಡವಾಗುತ್ತಿದೆ. ಹೊಸ ರೈಲು ಮಾರ್ಗ ಯೋಜನೆಗೆ ಕರ್ನಾಟಕ ಸರ್ಕಾರ ಸಹ 463 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ.

 

ಧಾರವಾಡ-ಕಿತ್ತೂರು-ಬೆಳಗಾವಿ ನೇರ ರೈಲು ಮಾರ್ಗ ಯೋಜನೆ ಅನುಷ್ಠಾನದಿಂದ ಹಣ, ಸಮಯ ಎರಡೂ ಉಳಿತಾಯವಾಗಲಿದೆ. 2019ರಲ್ಲಿ ಈ ಹೊಸ ರೈಲು ಮಾರ್ಗ ಯೋಜನೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿತ್ತು.

 

ಜನವರಿ 12ರಂದು ಯೋಜನೆಗೆ ಶಂಕು ಸ್ಥಾಪನೆ
 ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಈ ಕುರಿತು ಮಾಹಿತಿ ನೀಡಿದ್ದಾರೆ. ಧಾರವಾಡ-ಕಿತ್ತೂರು-ಬೆಳಗಾವಿ ನೇರ ರೈಲು ಮಾರ್ಗ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ