Breaking News

ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಠಾಕ್ರೆ

Spread the love

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆಗೆ ತಿಳಿಸಿದ್ದಾರೆ.

 

‘ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದು, ಮಹಾರಾಷ್ಟ್ರ ಸಿಎಂ ಶಿಂದೆ ಮೌನವಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರಸ್ತಾವನೆಯಲ್ಲಿ ಇದನ್ನು ಸೇರಿಸಿ ಸದನ ಅಂಗೀಕರಿಸಬೇಕು’ ಎಂದು ಉದ್ಧವ್ ಹೇಳಿದ್ದಾರೆ.

ಉದ್ಧವ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಏಕನಾಥ್ ಶಿಂದೆ, ಸುಪ್ರೀಂ ಕೋರ್ಟ್‌ನಲ್ಲಾಗಲಿ ಅಥವಾ ಕೇಂದ್ರದ ಬಳಿಯಾಗಲಿ, ಪ್ರತಿ ಇಂಚು ಭೂಮಿಗಾಗಿ ಹೋರಾಡುತ್ತೇವೆ. ಗಡಿಯಲ್ಲಿ ವಾಸಿಸುವವರ ಮೇಲಿನ ಅನ್ಯಾಯದ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ