Breaking News

ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ :ಪ್ರಲ್ಹಾದ ಜೋಶಿ

Spread the love

ಧಾರವಾಡ: ‘ಪಕ್ಷ ಕಟ್ಟುವುದಕ್ಕೆ, ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ. ಆದರೆ ಹಾಗೆ ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.

 

ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಹೊಸ ಪಕ್ಷ ಸ್ಥಾಪನೆಯಿಂದ ಬಿಜೆಪಿಗೇನೂ ನಷ್ಟವಿಲ್ಲ. ಬಿಜೆಪಿ ತತ್ವ ಸಿದ್ಧಾಂತಗಳ ಮೇಲೆ ಚುನಾವಣೆ ಎದುರಿಸುತ್ತದೆ’ ಎಂದರು.

ನ್ಯಾಯಾಲಯದ ಆದೇಶದಂತೆ ತೆರವು

‘ಹುಬ್ಬಳ್ಳಿಯ ಬೈರಿದೇವರಕೊಪ್ಪದ ದರ್ಗಾ ತೆರವು ಕುರಿತು ಕಾಂಗ್ರೆಸ್ ಮುಖಂಡರು ಅಪಸ್ವರ ಎತ್ತುತ್ತಿರುವುದು ಹಾಸ್ಯಾಸ್ಪದ. ಬಿಆರ್‌ಟಿಎಸ್ ಮಾರ್ಗ ನಿರ್ಧಾರವಾಗಿದ್ದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ. ಆಗ ದರ್ಗಾ ಜಾಗವನ್ನು ರಕ್ಷಿಸಲು ಯೋಜನೆ ರೂಪಿಸದೇ, ಈಗ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದಾರೆ’ ಎಂದರು.

‘ಈ ಮಾರ್ಗಕ್ಕೆ 12 ದೇವಾಲಯ, ಒಂದು ಚರ್ಚ್‌ ತೆರವುಗೊಳಿಸಲಾಗಿದೆ. ಇದೀಗ ನ್ಯಾಯಾಲಯದ ಆದೇಶದಂತೆ ತೆರವುಗೊಳಿಸಲಾಗಿದೆ. ಮುಸ್ಲೀಮರೂ ಯಾವುದೇ ಬೇಸರವಿಲ್ಲದೆ ದರ್ಗಾ ಸ್ಥಳಾಂತರಿಸಿದ್ದಾರೆ. ಆದರೆ ಇಂಥ ವಿಷಯಗಳನ್ನು ಬಿಜೆಪಿ ನಾಯಕರ ತಲೆಗೆ ಕಟ್ಟುವ ಚಾಳಿ ಕಾಂಗ್ರೆಸ್ ಮುಖಂಡರು ಬಿಡಬೇಕು’ ಎಂದರು.

‘ದರ್ಗಾ ತೆರವು ಮಾಡುವಂತೆ ಯಾವುದೇ ಸಚಿವರು ಹಾಗೂ ಶಾಸಕರು ಸೂಚಿಸಿಲ್ಲ. ಇದರಲ್ಲಿ ರಾಜ್ಯ ಸರಕಾರದ ಹಸ್ತಕ್ಷೇಪವೂ ಇಲ್ಲ. ರಾತ್ರಿ ದರ್ಗಾ ತೆರುವಿಗೆ ಸೂಚಿಸಿದ ಕೆಲ ಕಾಂಗ್ರೆಸ್ ಮುಖಂಡರೇ, ಮರುದಿನ ಬೆಳಗ್ಗೆ ತೆರವುವಾದಾಗ ಬೊಬ್ಬೆ ಹೊಡೆದರು. ಇಂಥ ನಾಯಕರ ಹೆಸರು ಬಹಿರಂಗಪಡಿಸಲ್ಲ’ ಎಂದು ಜೋಶಿ ಹೇಳಿದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ