ವಿಜಯಪುರ: ಉಕ್ರೇನ್-ರಷ್ಯಾ ಯುದ್ಧದ ಪರಿಣಾಮ ಜೀವ ಉಳಿಸಿಕೊಂಡು ಭಾರತಕ್ಕೆ ಮರಳಿದ್ದ ನಿರಾಶ್ರಿತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸದ ಕಾರಣಕ್ಕೆ ನಿರಾಶರಾದ ವಿದ್ಯಾರ್ಥಿಗಳು ಇದೀಗ ವಿದೇಶದತ್ತ ಮುಖ ಮಾಡತೊಡಗಿದ್ದಾರೆ.
ಉಕ್ರೇನ್ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮರಳಿದ್ದ ಸುಮಾರು 700 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ದೇಶದ ವಿವಿಧ ರಾಜ್ಯಗಳ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಮುಂದುವರಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ಎಂಸಿ) ನಿರಾಕರಿಸಿದೆ.
ರಾಜ್ಯದ ಅನೇಕ ಖಾಸಗಿ ವೈದ್ಯಕೀಯ ಕಾಲೇಜುಗಳು ಉಕ್ರೇನ್ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಲು ಮುಂದೆ ಬಂದಿದ್ದವು. ಆದರೆ, ಎನ್ಎಂಸಿ ಅನುಮತಿ ನೀಡಲಿಲ್ಲ.