Breaking News

ಸರ್ ಕೊಲೆ ಮಾಡ್ತಾರೆ ಬದುಕಿಸಿ: ಪೊಲೀಸರಿಗೆ ಗೋಗರೆದು ಶರಣಾದ ರೌಡಿ ಶೀಟರ್ ಸ್ಟಾರ್ ನವೀನ್

Spread the love

ಬೆಂಗಳೂರು : ಬೆಂಗಳೂರು ಸಿಸಿಬಿ ಮತ್ತು ಸೌಥ್ ಪೊಲೀಸರು ಹುಡುಕಾಡುತ್ತಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಸ್ಟಾರ್ ಇದ್ದಕ್ಕಿದ್ದಂತೆ ಸಿದ್ದಾಪುರ ಪೊಲೀಸರಿಗೆ ಕರೆ ಮಾಡಿ ಸರ್ ನನ್ನ ಉಳಿಸಿ, ಇಲ್ಲದಿದ್ದರೆ ನನ್ನ ಕೊಲೆ ಮಾಡುತ್ತಾರೆ ಎಂದು ಗೋಗರೆದಿದ್ದ.

ಇನ್ನೂ ನವೀನ ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಫಾಲೋ ಮಾಡಿದ ಗ್ಯಾಂಗ್‌ನಿಂದ ಈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಮೈಸೂರಿಗೆ ಎದುರಾಳಿಗಳಿಗೆ ಮೆಸೇಜ್ ಪಾಸ್​ ಮಾಡಿದ್ದ ವಿಷಯ ಕೇಳಿಸಿಕೊಂಡು ಜಾಗೃತನಾದ ರೌಡಿಶೀಟರ್ ನವೀನ ತಕ್ಷಣ ಸಿಸಿಬಿ ಹಾಗೂ ಸಿದ್ದಾಪುರ ಪೊಲೀಸರಿಗೆ ಸಹಾಯ ಬೇಡಿದ್ದಾನೆ. ಇತ್ತ ಪೊಲೀಸರು ಕೂಡ ನವೀನನಿಗೆ ಹತ್ತಿರವಿರುವ ಪೊಲೀಸ್ ಠಾಣೆಗೆ ಹೋಗಿ ರಕ್ಷಣೆ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.ಪೊಲೀಸರ ಸಲಹೆ ಮೇರೆಗೆ ಪ್ರಾಣ ಉಳಿಸಕೊಂಡು ರೌಡಿಶೀಟರ್ ಸ್ಟಾರ್ ನವೀನ್ ಸದ್ಯ ಸಿದ್ದಾಪುರ ಪೊಲೀಸರ ವಶದಲ್ಲಿದ್ದಾನೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ