Breaking News

ಸುವರ್ಣಸೌಧಕ್ಕೆ ನುಗ್ಗಲು ಪ್ರತಿಭಟನಾನಿರತ ವಕೀಲರ ಯತ್ನ: ಪೊಲೀಸರೊಂದಿಗೆ ನೂಕಾಟ-ತಳ್ಳಾಟ

Spread the love

ಬೆಳಗಾವಿ: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘದಿಂದ ನಡೆದಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಾರೆ ಈ ವೇಳೆ ರಾಷ್ಟ್ರೀಯ ಹೆದ್ದಾರಿ ಮೇಲೆ ಕಿಲೋಮೀಟರ್ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿದೆ.

 

ಸುವರ್ಣ ವಿಧಾನಸೌಧದ ಗೇಟಿನೆದುರು ವಕೀಲರು ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಗೇಟ್ ಒಳಗೆ ನುಗ್ಗಲು ಯತ್ನಿಸಿದ್ದಾರೆ.

ಗೇಟ್ ಮುಂದೆ ನೂಕು‌ನುಗ್ಗಲು ನಡೆದಿದ್ದು, ತಳ್ಳಾಟ ನೂಕಾಟ ನಡೆದಿದೆ. ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಒಳ ಹೋಗಲು ವಕೀಲರು ಯತ್ನಿಸುತ್ತಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ