Breaking News

ಅವಳಿನಗರದ ವಿವಿಧೆಡೆ ಕಳ್ಳತನ ಮಾಡಿದ ಇಬ್ಬರನ್ನೂ ಹುಬ್ಬಳ್ಳಿಯ ನವನಗರ ಪೊಲೀಸರು ಬಂಧಿಸುವಲ್ಲಿ ಯಶ್ವಸಿ

Spread the love

ಹುಬ್ಬಳ್ಳಿ: ಅವಳಿನಗರದ ವಿವಿಧೆಡೆ ಕಳ್ಳತನ ಮಾಡಿದ ಇಬ್ಬರನ್ನೂ ಹುಬ್ಬಳ್ಳಿಯ ನವನಗರ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಹುಬ್ಬಳ್ಳಿಯ ವೀರಮಾರುತಿ ನಗರದ ಭೀಮಣ್ಣ ಕ್ವಾಟಿ ಮತ್ತು ನಾಗರಾಜ ಕ್ವಾಟಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 6.32 ಲಕ್ಷ ಮೌಲ್ಯದ 158 ಗ್ರಾಂ ಬಂಗಾರ ಹಾಗೂ 3, 800 ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರಿಬ್ಬರು ಭೈರಿದೇವರಕೊಪ್ಪದಲ್ಲಿ ನಡೆದ ಎರಡು ಮನೆ ಹಾಗೂ ನವನಗರದ ಕೆಸಿಸಿ ಕಾಲೋನಿಯಲ್ಲಿ ಒಂದು ಮನೆ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರಿಬ್ಬರನ್ನ ನವನಗರ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಚಿನ್ನಾಭರಣ ಜಪ್ತಿ ಮಾಡುವಲ್ಲಿ ಯಶ್ವಸಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನ ಹಿಡಿಯುವಲ್ಲಿ ನವನಗರ ಪೊಲೀಸರು ಯಶ್ವಸಿಯಾದ ಪರಿಣಾಮ ಪೊಲೀಸ್ ಆಯುಕ್ತರು ನವನಗರ ಠಾಣೆಯ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ

Spread the love ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯ ರಾತ್ರಿ ಎರಡು ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ