Breaking News
Home / ಜಿಲ್ಲೆ / ಬೆಂಗಳೂರು / ಈಗ ಸಿ.ಟಿ.ರವಿ ಏಕಕಾಲಕ್ಕೆ ಐದು ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿ

ಈಗ ಸಿ.ಟಿ.ರವಿ ಏಕಕಾಲಕ್ಕೆ ಐದು ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿ

Spread the love

ಬೆಂಗಳೂರು,ಅ.7- ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಪಕ್ಷದ ಪ್ರಮುಖ ಪದಾಕಾರಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕೆಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ.

ಇದರಲ್ಲಿ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಲಕ್ಷದ್ವೀಪಗಳ ಉಸ್ತುವಾರಿಯನ್ನು ವಹಿಸಲಾಗಿದೆ.

ಬಿಹಾರ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಮುಗಿದ ಬಳಿಕ ಅಕೃತವಾಗಿ ಘೋಷಣೆಯಾಗಲಿದ್ದು, ಕರ್ನಾಟಕ ಉಸ್ತುವಾರಿಯಾಗಿದ್ದ ಮುರುಳೀಧರ್ ರಾವ್ ಸ್ಥಾನ ಪಲ್ಲಟವಾಗುವ ಸಾಧ್ಯತೆ ಹೆಚ್ಚಾಗಿದೆ.

ಸಾಮಾನ್ಯವಾಗಿ ಬಿಜೆಪಿಯಲ್ಲಿ ರಾಜ್ಯ ಉಸ್ತುವಾರಿಗಳನ್ನು ಹೊರರಾಜ್ಯದವರನ್ನೇ ಈವರೆಗೂ ನೇಮಕ ಮಾಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ರಾಜ್ಯದವರನ್ನೇ ನೇಮಿಸಿರುವುದು ವಿಶೇಷವಾಗಿದೆ. ಈ ಮೊದಲು ರಾಜ್ಯ ಉಸ್ತುವಾರಿಗಳಾಗಿ ದಿವಂಗತ ಅರುಣ್ ಜೇಟ್ಲಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಅನೇಕರು ಕರ್ನಾಟಕ ಉಸ್ತುವಾರಿಗಳಾಗಿದ್ದರು.

ಇದೀಗ ಸಿ.ಟಿ.ರವಿ ಅವರಿಗೆ ರಾಜ್ಯ ಉಸ್ತುವಾರಿಯ ಜೊತೆಗೆ ಐದು ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿಯನ್ನು ನೀಡಿರುವುದು ಅವರ ಹೊಣೆಗಾರಿಕೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಗ್ಗೆ ಪಕ್ಷದಿಂದ ಅಕೃತವಾಗಿ ಆದೇಶ ಹೊರಬೀಳದಿದ್ದರೂ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಹಿಂದೆ ಸಿ.ಟಿ.ರವಿ ಅವರು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸಹ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಇನ್ನೊಂದು ವಿಶೇಷವೆಂದರೆ ಕರ್ನಾಟಕದವರನ್ನೇ ಐದು ರಾಜ್ಯಗಳ ಉಸ್ತುವಾರಿಯಾಗಿ ನೇಮಕ ಮಾಡಿರುವುದು ಇದೇ ಮೊದಲು.

ಕೇಂದ್ರದಲ್ಲಿ ಹಿಂದೆ ಸಚಿವರಾಗಿದ್ದ ದಿವಂಗತ ಅನಂತಕುಮಾರ್ ಅವರು ಬೇರೆ ಬೇರೆ ರಾಜ್ಯಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ನಂತರ ಈಗ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿರುವ ಬಿ.ಎಲ್.ಸಂತೋಷ್ ಕೂಡ ಉಸ್ತುವಾರಿಯಾಗಿ ಕೆಲಸ ಮಾಡಿರುವ 2ನೇ ಕನ್ನಡಿಗ.

ಈಗ ಸಿ.ಟಿ.ರವಿ ಏಕಕಾಲಕ್ಕೆ ಐದು ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿಯಾಗಿ ನೇಮಕವಾಗಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಹಿನ್ನೆಲೆಯಲ್ಲಿ ಕಳೆದ ವಾರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಈವರೆಗೂ ರಾಜೀನಾಮೆಯನ್ನು ಅಂಗೀಕರಿಸಿಲ್ಲ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ