Breaking News

ಕೊರೋನಾ ಆತಂಕದಲ್ಲಿದ್ದ ವಿಶ್ವಕ್ಕೆ ಸಮಾಧಾನಕರ ಸುದ್ದಿ ಕೊಟ್ಟ WHO..!

Spread the love

ವಿಶ್ವಸಂಸ್ಥೆ,ಅ.7-ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಪೀಡಿತರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹಲವು ಏಳುಬೀಳುಗಳ ನಡುವೆಯೇ ಕೋವಿಡ್-19 ಸೋಂಕಿನ ಚಿಕಿತ್ಸೆಗೆ ಈ ವರ್ಷಾಂತ್ಯಕ್ಕೆ ಔಷ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅದನೌ ಗೆಬ್ರಿಯಾಸಿಸ್ ಇದನ್ನು ಪ್ರಕಟಿಸಿದ್ದು, ಈ ವರ್ಷದ ಅಂತ್ಯದವರೆಗೆ ಕೊರೊನಾಗೆ ಔಷ ಲಭ್ಯವಾಗಲಿದೆ.

ರ್ಷಾಂತ್ಯಕ್ಕೆ ಔಷ ಸಿಗಲಿದೆ ಎಂಬ ಆಶಾ ಭಾವನೆಯನ್ನು ಹೊಂದಿದ್ದೇವೆ. ಇನ್ನು ಎರಡು ಅಥವಾ ಮೂರು ಸುತ್ತು ಕಾರ್ಯಕಾರಿ ಮಂಡಳಿಯ ಸಭೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಹೊರಬೀಳಲಿದೆ. ಏನೇ ಆದರೂ ಡಿಸೆಂಬರ್ ಅಂತ್ಯಕ್ಕೆ ಔಷ ಸಿಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಒಟ್ಟು 9 ಮಾದರಿಯ ಕೋವಾಕ್ಸ್ ಔಷಗಳನ್ನು ಬಳಕೆ ಮಾಡಿದ್ದೇವೆ. ಕೆಲವು ಔಷಗಳಿಂದ ಸಕಾರಾತ್ಮಕ ಫಲಿತಾಂಶ ಬಂದಿದೆ. 2021ರ ಅಂತ್ಯಕ್ಕೆ ಸುಮಾರು 2 ಬಿಲಿಯನ್ ಪ್ರಮಾಣದ ಔಷಗಳನ್ನು ವಿತರಣೆ ಮಾಡುವ ಗುರಿಯನ್ನು ಇಟ್ಟುಕೊಂಡಿದ್ದೇವೆ ಎಂದು ಟೆಡ್ರೋಸ್ ಅದನೌ ಗೆಬ್ರಿಯಾಸಿಸ್ ಹೇಳಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ