Breaking News
Home / Uncategorized / ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ಬಿಡುಗಡೆ

ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ಬಿಡುಗಡೆ

Spread the love

ದಗ: ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರವಿವಾರ ನಗರದಲ್ಲಿ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ವಿಜಯೇಂದ್ರ ಅವರು, ನಮ್ಮ ನಾಡಿನ ಯುಗಪುರುಷರು, ಸ್ವಾಮೀಜಿಗಳು ತ್ರಿವಿಧ ದಾಸೋಹದ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ.

ಹಾನಗಲ್ ಗುರುಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಚಲನಚಿತ್ರವನ್ನಾಗಿ ಮಾಡಿರುವುದು ಸಂತಸದ ವಿಷಯವಾಗಿದೆ. ಕುಮಾರಶಿವಯೋಗಿಗಳು ನಡೆದು ಬಂದ ಹಾದಿ, ಸಮಾಜಕ್ಕೆ ನೀಡಿದ ಉತ್ತಮ ಸಂದೇಶ, ನೀತಿಪಾಠಗಳನ್ನು ಯವಕರಿಗೆ ತಲುಪಿಸುವ ಉದ್ದೇಶದಿಂದ ನಿರ್ಮಾಣ ಮಾಡಿರುವ ವಿರಾಟಪುರ ವಿರಾಗಿ ಚಲನಚಿತ್ರ ರಾಜ್ಯ, ದೇಶದ ಜನರ ಮನೆಮನ ತಲುಪಲಿ ಎಂದು ಹಾರೈಸಿದರು.

ವಿರಾಟಪುರ ವಿರಾಗಿ ಕೃತಿಯನ್ನು ಬಿಡುಗಡೆಗೊಳಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನು ಧಾರ್ಮಿಕವಾಗಿ ಆಚರಿಸುವಂತೆ ಅವಕಾಶ ಒದಗಿಸಿ ಕೊಟ್ಟಿರುವ ಜಡೆಯ ಶಾಂತಲಿಂಗ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜೊತೆಗೆ ಶ್ರೀಗಳ ಹಾಗೂ ನಿರ್ಮಾಪಕರ ಅಪ್ಪಣೆ ಮೇರೆಗೆ ಗದಗ ನಗರದಲ್ಲಿ ಚಲನಚಿತ್ರ ಬಿಡುಗಡೆಯಾದ ದಿನದಿಂದ ಒಂದು ವಾರಗಳ ಕಾಲ ಉಚಿತ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಹೇಳಿದರು.

ಜಡೆಯ ಶಾಂತಲಿಂಗ ಶ್ರೀಗಳು, ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ, ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಸಮ್ಮುಖ ವಹಿಸಿದ್ದರು.


Spread the love

About Laxminews 24x7

Check Also

ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್

Spread the love ಖಾನಾಪುರ: ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ