Breaking News

ಡಿ.ಕೆ ಶಿವಕುಮಾರ್ ಅವರು ಗಳಿಸಿದ್ದು ಸಾರ್ವಜನಿಕರ ಹಣ.ಶ್ರೀರಾಮುಲು 100 ಕೋಟಿ ರೂಪಾಯಿ ಮೌಲ್ಯದ ಮನೆ ಕಟ್ಟಲು ಹಣ ಎಲ್ಲಿಂದ ಬಂತು?:ಎಸ್.ಆರ್ ಹಿರೇಮಠ

Spread the love

ಧಾರವಾಡ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಗಳಿಸಿದ್ದು ಸಾರ್ವಜನಿಕರ ಹಣ. ಅವರ ಮೇಲೆ ಎಫ್‍ಐಆರ್ ದಾಖಲಿಸಬೇಕು. ಅವರ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ಸ್ವಾಗತಾರ್ಹ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಹೇಳಿದರು.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಮೇಲೆ ಎಫ್‍ಐಆರ್ ದಾಖಲಿಸಿ ಬೇರೆ ಯಾರೂ ಇಂತಹ ಕೆಲಸ ಮಾಡದಂತೆ ಮಾಡಬೇಕು.

ಅವರ ಅಕ್ರಮ ಸಂಪಾದನೆ ಮೇಲೆ ಸಿಬಿಯ ದಾಳಿ ಮಾಡಿರುವುದು ಬಹಳ ಮಹತ್ವದ ವಿಷಯ. ಅವರ ಪರವಾಗಿ ಈ ಕಾಂಗ್ರೆಸ್ಸಿನವರು ಪ್ರತಿಭಟನೆ ಮಾಡುವುದನ್ನು ಬಂದ್ ಮಾಡಬೇಕು ಎಂದರು.

ಸಚಿವ ಶ್ರೀರಾಮುಲು 100 ಕೋಟಿ ರೂಪಾಯಿ ಮೌಲ್ಯದ ಮನೆ ಕಟ್ಟಲು ಹಣ ಎಲ್ಲಿಂದ ಬಂತು? ನಾವು ಈಗಾಗಲೇ ಈ ರೀತಿ ಅಕ್ರಮ ಸಂಪಾದನೆ ಮಾಡಿದವರ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೆವೆ ಎಂದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ