Breaking News

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಮರಣ ಪತ್ರ- ಲಿಂಬಾವಳಿ ಸೇರಿ 6 ಹೆಸರು

Spread the love

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ (47) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರದೀಪ್ ಬರೆದಿದ್ದಾರೆ ಎನ್ನಲಾದ 8 ಪುಟಗಳ ಮರಣ ಪತ್ರ ಕಾರಿನಲ್ಲಿ ಸಿಕ್ಕಿದೆ.

ಶಾಸಕ ಅರವಿಂದ ಲಿಂಬಾವಳಿ, ಉದ್ಯಮಿಗಳಾದ ಕೆ. ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಜಯ ರಾಮ್ ರೆಡ್ಡಿ ಹಾಗೂ ರಾಘವ ಭಟ್‌ ಎಂಬುವರ ಹೆಸರುಗಳನ್ನು ಮೊಬೈಲ್‌ ಸಂಖ್ಯೆ ಸಹಿತವಾಗಿ ಉಲ್ಲೇಖಿಸಲಾಗಿದೆ.

‘ಆರು ಜನರಿಂದ ನನಗೆ ಅನ್ಯಾಯವಾಗಿದೆ. ಇವರಿಗೆ ಶಿಕ್ಷೆ ಕೊಟ್ಟು, ನನಗೆ ನ್ಯಾಯ ಒದಗಿಸಬೇಕು’ ಎಂಬುದು ಪತ್ರದಲ್ಲಿದೆ. ಇದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಬಳಿಯ ಅಮಲೀಪುರದ ನಿವಾಸಿ ಪ್ರದೀಪ್, ಹೊಸ ವರ್ಷಾಚರಣೆ ಅಂಗವಾಗಿ ನೆಟ್ಟಗೆರೆ ಬಳಿಯ ರೆಸಾರ್ಟ್‌ಗೆ ಶನಿವಾರ ರಾತ್ರಿ ಕುಟುಂಬದೊಂದಿಗೆ ಬಂದಿದ್ದರು. ಭಾನುವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬದವರ ಹೇಳಿಕೆ ಆಧರಿಸಿ ತನಿಖೆ ಮುಂದುವರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ಹಣ ಪಡೆದು ವಂಚನೆ: ‘ಎಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್‌ವೊಂದನ್ನು ನಿರ್ಮಿಸಲಾಗುತ್ತಿತ್ತು. ನನ್ನನ್ನು ಪಾಲುದಾರರರಾಗಿ ಮಾಡಿಕೊಳ್ಳುವುದಾಗಿ ಹೇಳಿದ್ದ ಉದ್ಯಮಿಗಳು, ₹ 1.5 ಕೋಟಿ ಪಡೆದಿದ್ದರು. ಮನೆ ಮಾರಿ, ಸಾಲ ಮಾಡಿ ಹಣ ಕೊಟ್ಟಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ವಂಚನೆ ಮಾಡಿದ್ದು, ನನಗೆ ಒಟ್ಟು ₹ 2.25 ಕೋಟಿ ಬರಬೇಕಿದೆ’ ಎಂಬುದಾಗಿ ಪ್ರದೀಪ್ ಮರಣಪತ್ರದಲ್ಲಿ ಬರೆದಿರುವುದಾಗಿ ಮೂಲಗಳು ಹೇಳಿವೆ.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ