Breaking News

ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು‌ ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ

Spread the love

ಕಿತ್ತೂರು ತಾಲೂಕಿನ ಶಿವನೂರು ಗ್ರಾಮದಲ್ಲಿ ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು‌ ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಮೃತ ವಿದ್ಯಾರ್ಥಿನಿ ಅಕ್ಷತಾ ಹೂಲಿಕಟ್ಟಿ ಮೃತದೇಹ ಶಿವನೂರು ತಲುಪುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸರ್ಕಾರಕ್ಕೆ ಹಿಡಿಶಾಪ ಹಾಕಿ ನೂರಾರು ಮಹಿಳೆಯರು ಕಣ್ಣೀರುಡುತ್ತಿರುವ ದೃಶ್ಯ ಎಲ್ಲರು ಕರುಳು ಚುರ್ ಎನ್ನುವಂತಿತ್ತು.

ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಹಾಗೂ ಶಿವನೂರು ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆಯೂ ಒತ್ತಾಯಿಸಿ ಶಿವನೂರು ಗ್ರಾಮದಲ್ಲಿ ಎರಡೂವರೆ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಲಾಯಿತು. ಮೃತ ಅಕ್ಷಿತಾ ಭಾವಚಿತ್ರ ಹಿಡಿದು ಕಣ್ಣೀರಿಡುತ್ತಾ ಪ್ರತಿಭಟನೆ ನಡೆಸಲಾಯಿತು.

ಮಾಜಿ ಶಾಸಕ ಡಿ. ಬಿ. ಇನಾಮದಾರ, ಮಾಜಿ ಜಿ.ಪಂ.ಸದಸ್ಯರಾದ ಬಾಬಾಸಾಹೇಬ ಪಾಟೀಲ, ರೋಹಿಣಿ ಪಾಟೀಲ ಸೇರಿದಂತೆ ಇನ್ನಿತರ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಶಿವನೂರು ಗ್ರಾಮಕ್ಕೆ ಸಮರ್ಪಕ ಬಸ್‌ಗೆ ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. 15 ದಿನಗಳ ಹಿಂದೆಯಷ್ಟೇ ಶಾಸಕ ಮಹಾಂತೇಶ ದೊಡ್ಡಗೌಡರಗೂ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ