Breaking News

ಕುಡಿದ ಅಮಲಿನಲ್ಲಿ ಜಗಳ: ವ್ಯಕ್ತಿ ಕೊಲೆ

Spread the love

ಬೈಲಹೊಂಗಲ: ತಾಲ್ಲೂಕಿನ ಆನಿಗೋಳ ಗ್ರಾಮದಲ್ಲಿ ಭಾನುವಾರ ರಾತ್ರಿ ಮದ್ಯ ಕುಡಿದ ಮತ್ತಿನಲ್ಲಿ ಯುವಕನೊಬ್ಬ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಮಂಜುನಾಥ ರುದ್ರಪ್ಪ ಸುಣಗಾರ (45) ಕೊಲೆಯಾದವರು. ಅಜಯ ಗುರುಸಯ್ಯ ಹಿರೇಮಠ (26) ಆರೋಪಿ.

 

ಇಬ್ಬರೂ ಮದ್ಯ ಕುಡಿಯಲು ಕುಳಿತಿದ್ದರು. ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಡಿದರು. ಈ ವೇಳೆ ಹತ್ತಿರದಲ್ಲಿದ್ದ ದೊಡ್ಡ ಕಲ್ಲು ಎತ್ತಿಕೊಂಡ ಅಜಯ ಮಂಜುನಾಥ ಅವರ ತಲೆ ಮೇಲೆ ಎಸೆದು, ಅಲ್ಲಿಂದ ತಲೆಮರೆಸಿಕೊಂಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುನಾಥ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡ ಆರೋಪಿ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ