Breaking News
Home / ಜಿಲ್ಲೆ / ಚಿತ್ರದುರ್ಗ / ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

Spread the love

ಚಿತ್ರದುರ್ಗ: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದೆ. ಅರ್ಥಾತ್, ರಾಜ್ಯದ ಮಾಜಿ ಸಚಿವರೊಬ್ಬರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

 

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುರೇಶ್ ಮಾಜಿ ಸಚಿವ ಎಚ್. ಆಂಜನೇಯ ಅವರ ಆಪ್ತ.

ಆದಾಯ ತೆರಿಗೆ ಅಧಿಕಾರಿಗಳ ತಂಡ ಹುಬ್ಬಳ್ಳಿಯಿಂದ ಬಂದು ದಾಳಿ ನಡೆಸಿದ್ದು, ಸುರೇಶ್ ಮನೆಯಲ್ಲಿ ಜಾಲಾಡಿದೆ. ಆದಾಯಕ್ಕೆ ಮೀರಿದ ಹಣ, ಆಸ್ತಿ ಗಳಿಕೆ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ನ್ಯಾಯಾಲಯಕ್ಕೆ ಮುರುಘಾಶ್ರೀ ವಿರುದ್ಧ 694 ಪುಟಗಳ ಆರೋಪ ಪಟ್ಟಿ

Spread the love ಚಿತ್ರದುರ್ಗ: ‍ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಮುರುಘಾ ಮಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ