Breaking News

ಸಿಡಿ ಬಿಡುಗಡೆ ಮಾಡಲಿ,ಪ್ರದರ್ಶನ ಮಾಡಿಸುತ್ತೇನೆ: ಮುನಿರತ್ನ

Spread the love

ಬೆಂಗಳೂರು: ಸಿಡಿ ಇದ್ದರೆ ಬಿಡುಗಡೆ ಮಾಡಲಿ. ನಾನೇ 70 ಎಂಎಂ ಸ್ಕ್ರೀನ್‌ ಹಾಕಿ ವ್ಯವಸ್ಥೆ ಮಾಡಿಸುತ್ತೇನೆಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು 12 ಜನ ಜತೆಯಲ್ಲೇ ಇದ್ದೆವು. ಕುಮಾರಸ್ವಾಮಿ ನಿರ್ಮಾಪಕರು, ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

 

ಕುಮಾರಸ್ವಾಮಿ ಖಾಲಿ ಬುಟ್ಟಿ ಇಟ್ಟುಕೊಂಡು ಇರುತ್ತಾರೆ. ಹಾವಿದೆ, ಹಾವಿದೆ ಎನ್ನುತ್ತಾರೆ. ಅದರಲ್ಲಿ ಹಾವಲ್ಲ, ಹಾವು ರಾಣಿ ಕೂಡ ಇಲ್ಲ. ಆ ಬುಟ್ಟಿ ತೆಗೆದು ಬಿಡಿ, ಗೊತ್ತಾಗಲಿ ಏನಾದರೂ ಇದ್ದರೆ ಬಿಡುಗಡೆ ಮಾಡಿ, ಖಾಲಿ ಡಬ್ಬ ಇಟ್ಕೊಂಡು ಅಲ್ಲಾಡಿಸಿದರೆ ಹೇಗೆ ಎಂದು ಪ್ರಶ್ನಿಸಿದರು.

12 ಜನ ಬಾಂಬೆ ಫ್ರೆಂಡ್ಸ್‌ಗಳ ಅಶ್ಲೀಲ ಚಿತ್ರಗಳಿದ್ದರೆ ರಾಜಕೀಯ ಬಿಟ್ಟು ಬಿಡುತ್ತೇವೆ. ನಾನಂತೂ ಬಾಂಬೆಗೆ ಹೋಗಿರಲಿಲ್ಲ, ಕುರುಕ್ಷೇತ್ರ ಸಿನೆಮಾಗಾಗಿ ಚೆನ್ನೈಗೆ ಹೋಗಿದ್ದೆ. ನನ್ನ ಬಾಂಬೆ ಫ್ರೆಂಡ್ಸ್‌ ಮೇಲಿನ ನಂಬಿಕೆ ಮೇಲೆ ನಾನು ರಾಜಕೀಯ ಬಿಡುತ್ತೇನೆ ಎಂದು ಹೇಳಿದರು.

ಸ್ಯಾಂಟ್ರೋ ರವಿ ಯಾರು, ಆತನ ವೃತ್ತಿ ಏನೋ ನನಗೆ ಗೊತ್ತಿಲ್ಲ. ನಾನು ಕೋರ್ಟ್‌ನಲ್ಲೂ ತಡೆಯಾಜ್ಞೆ ತಂದಿಲ್ಲ. ಸ್ಯಾಂಪಲ್‌ ಇದೆ, ಸ್ಯಾಂಪಲ್‌ ಇದೆ ಅಂತಾರೆ. ಸ್ಯಾಂಪಲ್‌ ನೋಡೋಕೆ ಅದೇನು ಸ್ವೀಟ್‌ ಅಂಗಡಿಯಾ ಎಂದು ಪ್ರಶ್ನಿಸಿದರು.

ದಾಖಲೆ ಇಲ್ಲದೆ ಮಾತಾಡುವವರು ಎಚ್‌ಡಿಕೆ ಅಲ್ಲ
ಬೆಂಗಳೂರು: ದಾಖಲೆಗಳಿಲ್ಲದೆ ಮಾತಾಡುವುದು ಕುಮಾರಸ್ವಾಮಿ ಅವರ ಜಾಯಮಾನವೇ ಅಲ್ಲ. ಸ್ಯಾಂಟ್ರೋ ರವಿ ಯಾರು ಅಂತ ಗೊತ್ತೇ ಇಲ್ಲ ಎಂದ ನಿಮ್ಮ ಸಚಿವರನ್ನು ಸಮರ್ಥಿಸಲು ಈಗ ಕಾಗಕ್ಕ-ಗುಬ್ಬಕ್ಕನ ಕಥೆ ಹೇಳುತ್ತಿದ್ದೀರಿ ಎಂದು ಜೆಡಿಎಸ್‌ ಟೀಕಿಸಿದೆ.


Spread the love

About Laxminews 24x7

Check Also

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಶಾಸಕ ಬಿ. ಆರ್. ಪಾಟೀಲ್ ಆರೋಪ

Spread the loveಬೆಂಗಳೂರು : ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆಡಳಿತ ಪಕ್ಷದ ಶಾಸಕರ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ