ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇಂದು ಬಿಡುಗಡೆಯಾಗಲಿರುವ ” ಸಿದ್ದು ನಿಜಕನಸುಗಳು” ಪುಸ್ತಕ ಭಾರಿ ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಟಿಪ್ಪು ನಿಜ ಕನಸು ಮಾದರಿಯಲ್ಲಿ ಸಿದ್ದು ನಿಜಕನಸು ಪುಸ್ತಕ ಬರೆಯಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದಾರೆ.
ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ಅಲ್ಪಸಂಖ್ಯಾತರ ಓಲೈಕೆ, ಪಿಎಫ್ ಐ ವಿರುದ್ಧ ಪ್ರಕರಣ ವಾಪಾಸ್ ಸೇರಿದಂತೆ ಹಲವಾರು ವಿಚಾರಗಳನ್ನು ಈ ಪುಸ್ತಕದಲ್ಲಿ ನಮೂದಿಸಲಾಗಿದ್ದು, ಅಂದಿನ ಟಿಪ್ಪುವೇ ಇಂದಿನ ಸಿದ್ದು ಎಂದು ಆರೋಪಿಸಲಾಗಿದೆ.