Breaking News

ಸಚಿವರೊಬ್ಬರ ಮನೆ ಮುಂದೆ ಮಾತ್ರ ಹೈಟೆಕ್ ರಸ್ತೆ, ಮಹಾನಗರದ ರಸ್ತೆಗಳನೋಡಿದ್ರೂ ಬರೀ ಹಳ್ಳಬಿದ್ದ ರಸ್ತೆಗಳು,

Spread the love

ಹುಬ್ಬಳ್ಳಿ: ಜಿಲ್ಲೆಯ ಸಚಿವರೊಬ್ಬರ ಮನೆ ಮುಂದೆ ಮಾತ್ರ ಹೈಟೆಕ್ ರಸ್ತೆ ನಿರ್ಮಾಣ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾರ್ವಜನಿಕ ರಸ್ತೆಗಳನ್ನ ರಿಪೇರಿ ಮಾಡದ ಅಧಿಕಾರಿಗಳು, ಸಚಿವರ ಮನೆ ಮುಂದೆ ಮಾತ್ರ ಹೈಟೆಕ್ ರಸ್ತೆ ನಿರ್ಮಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎಲ್ಲಿ ನೋಡಿದ್ರೂ ಬರೀ ಹಳ್ಳಬಿದ್ದ ರಸ್ತೆಗಳು, ತಗ್ಗು ಗುಂಡಿ ಕಾಣ ಸಿಗುತ್ತವೆ. ಆದರೆ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಮನೆ ಮುಂದಿನ ರಸ್ತೆಗೆ ಮಾತ್ರ ಹೈಟೆಕ್ ಟಚ್ ನೀಡಲಾಗಿದೆ. ಉಳಿದ ಕಡೆ ರಸ್ತೆಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ.ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನ ಸ್ಮಾರ್ಟ್ ಸಿಟಿ ಮಾಡ್ತೀವಿ ಅನ್ನೋ ಸಚಿವ ಜಗದೀಶ್ ಶೆಟ್ಟರ್, ಮಹಾನಗರದ ರಸ್ತೆಗಳ ರಿಪೇರಿ ಮಾಡಿಸೋದು ಬಿಟ್ಟು ತಮ್ಮ ಮನೆ ಮುಂದೆ ರಸ್ತೆಯನ್ನ ಮಾತ್ರ ಅಭಿವೃದ್ಧಿ ಮಾಡಿಸಿಕೊಂಡಿದ್ದಾರೆ. ಲೋಕೋಪಯೋಗಿ ಇಲಾಖೆಯ ವಿಶೇಷ ಅನುದಾನದಡಿ ಶೆಟ್ಟರ್ ತಮ್ಮ ಮನೆ ಮುಂದೆ 3.20 ಕೋಟಿ ರೂಪಾಯಿ ವೆಚ್ಚದಲ್ಲಿ ಪೇವರ್ಸ್ ಹಾಗೂ ಕಾಂಕ್ರಿಟ್ ರಸ್ತೆ ಮಾಡಿಸಿಕೊಳ್ಳುವ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಹೀಗಾಗಿ ಇಲ್ಲಿನ ಜನ ಆಕ್ರೋಶಗೊಂಡಿದ್ದಾರೆ.

ಈ ಬಗ್ಗೆ ಅಧಿಕಾರಿಗಳನ್ನ ಪ್ರಶ್ನೆ ಮಾಡಿದ್ರೆ ನಗರದಲ್ಲೂ ಸ್ಮಾರ್ಟ್ ಸಿಟಿ ಯೋಜನೆಯಡಿ ಹಲವು ರಸ್ತೆಗಳ ಕಾಮಗಾರಿ ನಡೆಯುತ್ತಿದೆ. ಶ್ರೀಘ್ರದಲ್ಲಿಯೇ ಎಲ್ಲ ರಸ್ತೆಗಳ ಕಾಮಗಾರಿ ಮುಗಿಯುತ್ತೆ ಎಂದು ಹಾರಿಕೆ ಉತ್ತರ ನೀಡ್ತಾರೆ.

ಹುಬ್ಬಳ್ಳಿ ಜನರು, ವಾಹನ ಸವಾರರು ತಗ್ಗು ಗುಂಡಿಗಳ ರಸ್ತೆಯಲ್ಲಿ ಓಡಾಟ ಮಾಡ್ತಾ ಇದ್ದರೆ ಉಸ್ತುವಾರಿ ಸಚಿವರ ಮನೆ ಮುಂದೆ ಮಾತ್ರ ಹೈಟೆಕ್ ರಸ್ತೆ ನಿರ್ಮಿಸುವ ಮೂಲಕ ಅಧಿಕಾರಿಗಳು ಸಚಿವರ ಕೃಪೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಸಚಿವರಿಗಾಗಿ ಹೈಟೆಕ್ ರಸ್ತೆ ನಮಗೆ ತಗ್ಗು ಗುಂಡಿ ರಸ್ತೆಯಾ ಎಂದು ಸಾರ್ವಜನಿಕರು ಅಧಿಕಾರಿಗಳು ಹಾಗೂ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಧಾರವಾಡದಲ್ಲಿ ಭಾರಿ ಮಳೆಯಿಂದ ನೆನೆದ ಮನೆಗೋಡೆ ಕುಸಿತ…

Spread the love ಧಾರವಾಡದಲ್ಲಿ ಭಾರಿ ಮಳೆಯಿಂದ ನೆನೆದ ಮನೆಗೋಡೆ ಕುಸಿತ… ತಪ್ಪಿದ ಭಾರಿ ಅನಾಹುತ. ಧಾರವಾಡ ಸೈದಾಪುರದಲ್ಲಿ ಘಟನೆ.. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ