Breaking News

ಸ್ಯಾಂಟ್ರೋ ರವಿ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುವುದು ಬೇಡ: ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಸ್ಯಾಂಟ್ರೋ ರವಿ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು, ಆತನ ಎಲ್ಲಾ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅವನಿಗೆ 20 ವರ್ಷದ ಇತಿಹಾಸವಿದೆ. ಈ ಹಿಂದೆ ಆತನೊಂದಿಗೆ ಹಲವರು ಸಂಪರ್ಕದಲ್ಲಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 

ಇಲ್ಲಿನ ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ವಿಚಾರದಲ್ಲಿ ಹೆಚ್ಚು ಮಹತ್ವ ಕೊಡುವುದು ಬೇಡ. ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎಂದರು.

ಸ್ಯಾಂಟ್ರೋ ರವಿ ನಡೆದ ಎಲ್ಲ ಅವ್ಯವಾರ ಅವರ ಹಿಂದಿನ‌ ಸರಕಾರಗಳ ಕಾಲದಲ್ಲಿಯೇ ಆಗಿದ್ದರಿಂದ ಇದರಲ್ಲಿ ಯಾರ ಯಾರ ಪಾತ್ರ ಎಷ್ಟೋ ಇದೆ. ಇನ್ನು ಕಾಂಗ್ರೆಸ್ ಪೇ ಸಿಎಂ, ಸ್ಯಾಂಟ್ರೋ ರವಿ ಅಭಿಯಾನವನ್ನು ಜನ ನೋಡುತ್ತಿದ್ದಾರೆ. ಅವರ ಕಾಲದಲ್ಲಿ ಸ್ಯಾಂಟ್ರೋ ಪ್ರಕರಣಗಳು ನಡೆದಿವೆ. ಹೀಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದರು

ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅದು ಅವರ ವೈಯಕ್ತಿಕ ವಿಚಾರ. ಚುನಾವಣೆ ಸಂದರ್ಭದಲ್ಲಿ ಎಲ್ಲ ನಾಯಕರು ನಿರ್ಣಯ ಕೈಗೊಳ್ಳುತ್ತಾರೆ. ಅದು ಅವರು ಮತ್ತು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಕೋಲಾರ ಜನತೆ ನಿರ್ಧಾರ ಮಾಡುತ್ತಾರೆ ಎಂದರು.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ