Breaking News
Home / ರಾಜಕೀಯ / ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಲು ಪ್ರಜಾಧ್ವನಿ ಯಾತ್ರೆ: ಡಿಕೆ ಶಿವಕುಮಾರ್

ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಲು ಪ್ರಜಾಧ್ವನಿ ಯಾತ್ರೆ: ಡಿಕೆ ಶಿವಕುಮಾರ್

Spread the love

ಬೆಂಗಳೂರು: ಹೊಸ ವರ್ಷ, ಹೊಸ ಪರ್ವ. ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ. ಈ ಪವಿತ್ರವಾದ ಗಳಿಗೆಯಲ್ಲಿ ಜನರಿಗಾಗಿ ಪ್ರಜಾಧ್ವನಿ ಯಾತ್ರೆ ವಿಚಾರ ತಿಳಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

 

ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜನರ ಭಾವನೆ ತಿಳಿಸಲು ಕಳೆದ ಎರಡು ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸತತವಾಗಿ ಪ್ರಯತ್ನಿಸಿದೆ. ಈ ಪ್ರಜಾಧ್ವನಿ ಯಾತ್ರೆ ಪ್ರಜೆಗಳ ಧ್ವನಿ, ಪ್ರಜೆಗಳ ಭಾವನೆ ಆಗಿದೆ. ನಾವು ಋಣಾತ್ಮಕತೆ ಬಗ್ಗೆ ಚಿಂತನೆ ಮಾಡುತ್ತಿಲ್ಲ. ಸಕಾರಾತ್ಮಕತೆ ಬಗ್ಗೆ ಯೋಚಿಸುತ್ತಿದ್ದೇವೆ ಎಂದರು.

ಕಳೆದ ಮೂರೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ವೈಫಲ್ಯ, ನಾವು ಜನರ ಬದುಕಿಗಾಗಿ ಏನು ಮಾಡಲು ಸಿದ್ಧವಿದ್ದೇವೆ ಎಂದು ತಿಳಿಸಿಲು ನಾವು ಈ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೇವೆ.ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಐತಿಹಾಸಿಕ ಸ್ಥಳ ಬೆಳಗಾವಿಯ ಗಾಂಧಿ ಬಾವಿಯಿಂದ ನಾಳೆ ಈ ಯಾತ್ರೆ ಆರಂಭವಾಗುತ್ತಿದೆ. ಗಾಂಧಿಜಿ ಅವರಿಗೆ ಗೌರವ ಸಲ್ಲಿಸಿ ಯಾತ್ರೆ ಆರಂಭಿಸುತ್ತಿದ್ದೇವೆ. ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ನಾಯಕತ್ವ ವಹಿಸಿಕೊಂಡ ಪುಣ್ಯ ಭೂಮಿಯಿಂದ ಯಾತ್ರೆ ಆರಂಭಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಬ್ರಿಟೀಷರನ್ನು ತೊಲಗಿಸಲು ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಂಡರು. ಈಗ ಅದೇ ಪುಣ್ಯಭೂಮಿಯಿಂದ ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಲು ಯಾತ್ರೆ ಆರಂಭಿಸುತ್ತಿದ್ದೇವೆ. ಕರ್ನಾಟಕ ರಾಜ್ಯದ ಬದಲಾವಣೆ ಹಾಗೂ ವಿಜಯಕ್ಕೆ ಮುನ್ನುಡಿ ಬರೆಯುತ್ತಿದ್ದೇವೆ. ಕರ್ನಾಟಕ ಅಭಿವೃದ್ಧಿಶೀಲ ರಾಜ್ಯ. ಇಡೀ ಭಾರತಕ್ಕೆ ನಮ್ಮ ಆಡಳಿತ ಮಾದರಿಯಾಗಿತ್ತು. ಇಡೀ ವಿಶ್ವದ ಉದ್ಯಮಿಗಳು ರಾಜ್ಯ ಹಾಗೂ ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆ ಮಾಡಲು ಉತ್ಸುಕರಾಗಿದ್ದರು. ಈ ರಾಜ್ಯದ ಮೂಲಕ ದೇಶವನ್ನು ನೋಡುತ್ತಿದ್ದರು. ಆದರೆ ಇಂದು ರಾಜ್ಯಕ್ಕೆ ಭ್ರಷ್ಟಾಚಾರದ ಕಳಂಕ ಬಂದಿದೆ. ಈ ಕಳಂಕವನ್ನು ನಾವು ದೂರ ಮಾಡಬೇಕು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ವರ್ಗದವರ ಬದುಕು ಹಸನಾಗಿಲ್ಲ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದ ಬಿಜೆಪಿ ರೈತರ ಬದುಕು ಹಸನು ಮಾಡಲಿಲ್ಲ. ಯುವಕರಿಗೆ ಉದ್ಯೋಗ ನೀಡಲಿಲ್ಲ. ಹೆಣದ ಮೇಲೆ ಹಣ ಮಾಡಿದ್ದಾರೆ. ಪ್ರತಿ ಇಲಾಖೆಯಲ್ಲಿ ಎಲ್ಲಾ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ