Breaking News

ಜನಾರ್ದನ ರೆಡ್ಡಿ ಆಸ್ತಿ ಜಪ್ತಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್‌

Spread the love

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಕ್ಕೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡುವ ಸಂಬಂಧ ಸಿಬಿಐ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಸರ್ಕಾರ ಕಾಲಾವಕಾಶ ಕೋರಿದೆ.

 

ಸಿಬಿಐ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಆಸ್ತಿ ಜಪ್ತಿಗೆ ಅನುಮತಿ ಕೋರಿ ಸಿಬಿಐ ಅರ್ಜಿ ಸಲ್ಲಿಸಿ 5 ತಿಂಗಳಾದರೂ ಮನವಿ ಪರಿಗಣಿಸದಿರಲು ಕಾರಣವೇನು? ನಿರ್ಧಾರ ಕೈಗೊಳ್ಳದೇ ಇರುವುದು ಸರ್ಕಾರದ ದೃಷ್ಟಿಯಲ್ಲಿ ಒಂದು ಕ್ರಮವಿರಬಹುದು. ಆದರೆ, ಅದನ್ನು ನ್ಯಾಯಾಲಯ ಒಪ್ಪುವುದಿಲ್ಲ. ಆರೋಪಿ ಪ್ರಭಾವಿ ವ್ಯಕ್ತಿ ಎಂಬ ಮಾತ್ರಕ್ಕೆ ವಿಳಂಬ ಸರಿಯಲ್ಲ ಎಂದು ನ್ಯಾಯಪೀಠ ಹೇಳಿತು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ