Breaking News
Home / ಜಿಲ್ಲೆ / ಮೈಸೂರ್ / ಗಂಗಾ ಕಲ್ಯಾಣ ಯೋಜನೆ : ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಖಾತೆಗೆ ಹಣ ಜಮಾ

ಗಂಗಾ ಕಲ್ಯಾಣ ಯೋಜನೆ : ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಖಾತೆಗೆ ಹಣ ಜಮಾ

Spread the love

ಮೈಸೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ ಸೆಟ್ ಇನ್ನಿತರ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಆದರೆ ಇದೀಗ ಟೆಂಡರ್ ಪದ್ದತಿಯನ್ನು ತೆಗೆದು ಹಾಕಲಾಗಿದೆ. ಫಲಾನುಭವಿಗಳಿಗೆ ನೇರವಾಗಿ ಕೊಡುವ ಹಣದಲ್ಲಿ ಬೊರ್ ವೆಲ್ ಕೊರೆಸುವುದು ಪಂಪ್ ಸೆಟ್ ಖರೀದಿ ಸೇರಿದಂತೆ ಎಲ್ಲ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇನ್ನು ಕೊಳವೆ ಬಾವಿ ಸೌಲಭ್ಯಪಡೆಯಲು ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ವರ್ಷದಲ್ಲಿ 1,700 ಕೊಳವೆಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ


Spread the love

About Laxminews 24x7

Check Also

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

Spread the love ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ