Breaking News

ಕಾರ್ಯಕರ್ತರನ್ನ ಕೇಳದೇ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ.ಸ್ಪಷ್ಟನೆ ನೀಡಿದ ವಿನಯ್ ಕುಲಕರ್ಣಿ

Spread the love

ಧಾರವಾಡ: ಬಿಜೆಪಿ ಸೇರ್ಪಡೆ ಸುದ್ದಿಗೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸ್ಪಷ್ಟನೆ ನೀಡಿದ್ದಾರೆ.ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ವಿನಯ್ ಕುಲಕರ್ಣಿ, ನಾನು ಯಾವ ಬಿಜೆಪಿ ನಾಯಕರನ್ನೂ ಭೇಟಿಯಾಗಿಲ್ಲ. ಬಿಜೆಪಿ ಸೇರುವ ಯಾವುದೇ ಪ್ರಸ್ತಾಪವೂ ನನ್ನ ಮುಂದೆ ಬಂದಿಲ್ಲ. ಎಲ್ಲವೂ ಮಾಧ್ಯಮಗಳ ಉಹಾಪೋಹ. ನಾನು ಬೆಳೆದ ಬಂದ ದಾರಿಯೇ ಬೇರೆ ಎಂದು ಹೇಳಿದರು.

ಮೊದಲ ಬಾರಿಗೆ ಪಕ್ಷೇತರ ಶಾಸಕನಾಗಿ ಆಯ್ಕೆಯಾಗಿದ್ದು, ಹೀಗಾಗಿ ಕಾರ್ಯಕರ್ತರು ಮತ್ತು ಎಲ್ಲ ಸಮಾಜದ ಜನ ನನ್ನ ಜೊತೆಯಲ್ಲಿದ್ದಾರೆ. ಕಾರ್ಯಕರ್ತರನ್ನ ಕೇಳದೇ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಎಂಎಲ್‍ಸಿ ಸಿ.ಪಿ.ಯೋಗೇಶ್ವರ ಕುದುರೆ ಖರೀದಿಗೆ ನನ್ನ ಹಾಲಿನ ಡೈರಿಗೆ ಬಂದಿದ್ದರು. ನನ್ನಿಂದ ಆರು ಕುದುರೆ ತೆಗೆದುಕೊಂಡು ಹೋಗಿದ್ದಾರೆ. ಅದು ಖಾಸಗಿ ಭೇಟಿಯಾಗಿದ್ದು, ರಾಜಕೀಯ ಬಗ್ಗೆ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಅಂತಾ ಸುದ್ದಿ ಆಗುತ್ತಿದೆ. ಬಿಜೆಪಿ ಸೇರಿದ್ರೂ ಈ ಕೇಸ್ ಗಳು ಇದ್ದೆ ಇರುತ್ತೆ. ನನ್ನ ಪರವಾಗಿ ಯಾವುದೇ ಸ್ವಮೀಜಿಗಳು ಬಿಜೆಪಿ ಜೊತೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ