Breaking News

ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ: ಕೋಡಿಮಠ ಸ್ವಾಮೀಜಿ

Spread the love

ಹೊಸಪೇಟೆ(ವಿಜಯನಗರ): ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ನಗರದಲ್ಲಿ ಶುಕ್ರವಾರ ಬಿಜೆಪಿ ನಾಯಕಿ ರಾಣಿ ಸಂಯುಕ್ತಾ ಅವರ ಮನೆಗೆ ಭೇಟಿ ನೀಡಿದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವುದೇ ಸಮ್ಮಿಶ್ರ ಸರ್ಕಾರ ಬರುವುದಿಲ್ಲ ಎಂದರು.

 

ಸಂಕ್ರಾಂತಿ ಫಲ ಹೇಳುವುದಕ್ಕೆ ಒಂದು ದಿನ ಬಾಕಿ ಇದೆ. ಇದು ಕಳೆಯದೇ ಭವಿಷ್ಯ ಹೇಳಲಾಗದು. ಸಂಕ್ರಾಂತಿ, ಯುಗಾದಿ ಬಳಿಕ ಮತ್ತೆ ಭಾರಿ ಮಳೆಯಾಗುತ್ತದೆ. ಜಾಗತಿಕ ಸಮಸ್ಯೆ ತಲೆದೋರುತ್ತದೆ, ಒಲೆಹೊತ್ತಿ ಉರಿದೊಡೆ ನಿಲಬಹುದು, ಧರೆಯತ್ತಿ ಉರಿದೊಡೆ ನಿಲಬಹುದೆ? ಇಂತಹ ಸಂದರ್ಭ 2023ರಲ್ಲಿ ಜಗತ್ತಿಗೆ ಆವರಿಸುತ್ತದೆ. ಇದರಿಂದಾಗಿ ಎರಡ್ಮೂರು ಬಹುದೊಡ್ಡ ತಲೆಗಳು ಉರುಳುತ್ತವೆ. ಸಾಧು ಸಂತರಿಗೆ ತೊಂದರೆ ಇದೆ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ