Breaking News

ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ: ಕೋಡಿಮಠ ಸ್ವಾಮೀಜಿ

Spread the love

ಹೊಸಪೇಟೆ(ವಿಜಯನಗರ): ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ನಗರದಲ್ಲಿ ಶುಕ್ರವಾರ ಬಿಜೆಪಿ ನಾಯಕಿ ರಾಣಿ ಸಂಯುಕ್ತಾ ಅವರ ಮನೆಗೆ ಭೇಟಿ ನೀಡಿದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವುದೇ ಸಮ್ಮಿಶ್ರ ಸರ್ಕಾರ ಬರುವುದಿಲ್ಲ ಎಂದರು.

 

ಸಂಕ್ರಾಂತಿ ಫಲ ಹೇಳುವುದಕ್ಕೆ ಒಂದು ದಿನ ಬಾಕಿ ಇದೆ. ಇದು ಕಳೆಯದೇ ಭವಿಷ್ಯ ಹೇಳಲಾಗದು. ಸಂಕ್ರಾಂತಿ, ಯುಗಾದಿ ಬಳಿಕ ಮತ್ತೆ ಭಾರಿ ಮಳೆಯಾಗುತ್ತದೆ. ಜಾಗತಿಕ ಸಮಸ್ಯೆ ತಲೆದೋರುತ್ತದೆ, ಒಲೆಹೊತ್ತಿ ಉರಿದೊಡೆ ನಿಲಬಹುದು, ಧರೆಯತ್ತಿ ಉರಿದೊಡೆ ನಿಲಬಹುದೆ? ಇಂತಹ ಸಂದರ್ಭ 2023ರಲ್ಲಿ ಜಗತ್ತಿಗೆ ಆವರಿಸುತ್ತದೆ. ಇದರಿಂದಾಗಿ ಎರಡ್ಮೂರು ಬಹುದೊಡ್ಡ ತಲೆಗಳು ಉರುಳುತ್ತವೆ. ಸಾಧು ಸಂತರಿಗೆ ತೊಂದರೆ ಇದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ