ಚನ್ನಮ್ಮನ ಕಿತ್ತೂರು: ಸಮೀಪದ ಶಿವ ಪೆಟ್ರೋಲ್ ಪಂಪ್ ಬಳಿ ತಮಿಳನಾಡಿಗೆ ಸೇರಿದ ಲಾರಿಯೊಂದಕ್ಕೆ ಶನಿವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟಿದೆ.
ಪೊಟ್ರೋಲ್ ಪಂಪ್ ಸಮೀಪದಲ್ಲೇ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಭಯದ ವಾತಾವರಣ ಮನೆ ಮಾಡಿತು.
ಮುಂಬೈಗೆ ಹೊರಟಿದ್ದ ಲಾರಿ ಚಾಲಕರು ಪಂಪ್ ಬಳಿ ವಿಶ್ರಾಂತಿಗಾಗಿ ತಂಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲಾರಿಯಲ್ಲಿದ್ದ ಎಳನೀರು ಕಾಯಿಗಳೂ ಸುಟ್ಟಿವೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಧಾವಿಸಿ ಬೆಂಕಿ ನುಂದಿಸಲು ಹರಸಾಹಸಪಟ್ಟರು.
ಸಿಪಿಐ ಮಹಾಂತೇಶ ಹೊಸಪೇಟ ಸ್ಥಳಕ್ಕೆ ಭೇಟಿ ನೀಡಿದ್ದರು.