Breaking News
Home / ರಾಜಕೀಯ / ಗಂಗಾಮತಸ್ಥರಿಗೆ ST ಮೀಸಲಾತಿ ಸೌಲಭ್ಯ : ಸಿಎಂ

ಗಂಗಾಮತಸ್ಥರಿಗೆ ST ಮೀಸಲಾತಿ ಸೌಲಭ್ಯ : ಸಿಎಂ

Spread the love

ಹಾವೇರಿ: ‘ಅಂಬಿಗರ ಸಮಾಜಕ್ಕೆ (ಗಂಗಾಮತಸ್ಥರು) ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸಮಾಜದ ಬೇಡಿಕೆಯನ್ನು ಈಡೇರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು.

 

ತಾಲ್ಲೂಕಿನ ನರಸೀಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಪರಿಶಿಷ್ಟ ಪಂಗಡದ ಮೀಸಲಾತಿ ಅಡಿ ಪರಿಗಣಿಸಲು ಕೇಂದ್ರ ಸಚಿವ ಅರ್ಜುನ್‌ ಮುಂಡಾ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಲಾಗಿದೆ. ಕೇಂದ್ರದ ಕಾನೂನು ಸಚಿವಾಲಯವು ಕೆಲವು ಸ್ಪಷ್ಟೀಕರಣ ಕೇಳಿದೆ. ಅದನ್ನು ರಾಜ್ಯದಿಂದ ಒದಗಿಸಲಾಗಿದೆ. ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ’ ಎಂದು ತಿಳಿಸಿದರು.

₹5 ಕೋಟಿ ಅನುದಾನ: ‘ಅಂಬಿಗರ ಸಮಾಜದ ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಪ್ರಗತಿಗಾಗಿ ಅಂಬಿಗರ ಚೌಡಯ್ಯನವರ ಮಠಕ್ಕೆ ₹10 ಕೋಟಿ ಅನುದಾನ ಘೋಷಿಸಿದ್ದು, ಸದ್ಯ ₹5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ