Home / ರಾಜಕೀಯ / ಕಿಸಾನ್ ನಗದನ್ನ 6000 ಸಾವಿರದಿಂದ 8000ಕ್ಕೆ ಹೆಚ್ಚಿಸಲು ಪ್ರಧಾನಿ ಯೋಜಿಸುತ್ತಿದ್ದಾರೆ ಎಂದು ವರದಿ?

ಕಿಸಾನ್ ನಗದನ್ನ 6000 ಸಾವಿರದಿಂದ 8000ಕ್ಕೆ ಹೆಚ್ಚಿಸಲು ಪ್ರಧಾನಿ ಯೋಜಿಸುತ್ತಿದ್ದಾರೆ ಎಂದು ವರದಿ?

Spread the love

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ರೈತರಿಗೆ ಅನೇಕ ಯೋಜನೆಗಳನ್ನ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ, 2019ರಲ್ಲಿ ರೈತರಿಗೆ ಸಹಾಯ ಮಾಡಲು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯನ್ನ ಪ್ರಾರಂಭಿಸಿದರು ಅನ್ನೋದು ತಿಳಿದಿರುವ ಸಂಗತಿ.

ಈ ಯೋಜನೆಯಡಿ ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 2 ಸಾವಿರ ರೂ.ನಂತೆ ವರ್ಷಕ್ಕೆ 6 ಸಾವಿರ ರೂ.ಗಳನ್ನ ರೈತರ ಖಾತೆಗೆ ಜಮಾ ಮಾಡಲಾಗ್ತಿದೆ. ಅದ್ರಂತೆ, ಇಲ್ಲಿಯವರೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರೈತರಿಗೆ 12 ಕಂತುಗಳಲ್ಲಿ ಹಣವನ್ನ ನೀಡಿದೆ. ಈಗ ಪಿಎಂ ಕಿಸಾನ್ನ 13ನೇ ಕಂತಿಗಾಗಿ ಲಕ್ಷಾಂತರ ರೈತರು ಹಣಕ್ಕಾಗಿ ಕಾಯುತ್ತಿದ್ದಾರೆ.

ಈ ಕ್ಷಣದಲ್ಲಿ ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಕಿಸಾನ್ ನಗದನ್ನ 6000 ಸಾವಿರದಿಂದ 8000ಕ್ಕೆ ಹೆಚ್ಚಿಸಲು ಪ್ರಧಾನಿ ಯೋಜಿಸುತ್ತಿದ್ದಾರೆ ಎಂದು ವರದಿಯಾಗಿದೆ.


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ