Breaking News
Home / ಜಿಲ್ಲೆ / ಧಾರವಾಡ / ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗದಿಂದ ದಂಡ

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗದಿಂದ ದಂಡ

Spread the love

ಧಾರವಾಡ : ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್‍ಪೋಸ್ಟ್ ಕಛೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು.

ಸದರಿ ಯೋಜನೆಯು ದಿ:31/03/2015 ರಂದು ಮುಕ್ತಾಯವಾಗಿತ್ತು.ತದನಂತರ ದೂರುದಾರ ಸದರಿ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01/04/2015 ರಿಂದ 31/03/2020 ರವರೆಗೆ ಮುಂದುವರೆಸಿದ್ದರು.

ಆ ಯೋಜನೆ ದಿ:31/03/2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ ಮೇಲಿನ ಬಡ್ಡಿ ಲೆಕ್ಕ ಹಾಕಿ ಅಂಚೆ ಇಲಾಖೆಯವರು ತನಗೆ ಹಣವನ್ನು ಹಿಂದಿರುಗಿಸದೇ ಸತಾಯಿಸಿ ತೊಂದರೆ ನೀಡಿ, ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

 

ಅಂಚೆ ಇಲಾಖೆಯವರು ಸದರಿ ದೂರಿಗೆ ಆಕ್ಷೇಪಣೆ ಎತ್ತಿಕೇಂದ್ರ ಸರ್ಕಾರದ ಸುತ್ತೋಲೆಯಂತೆ ಹೆಚ್.ಯು.ಎಫ್/ಪಿ.ಪಿ.ಎಫ್‍ಯೋಜನೆಯನ್ನು ಮುಂದುವರೆಸಲು ಅವಕಾಶ ಇರುವುದಿಲ್ಲ. ಕಾರಣ 2015ರ ನಂತರ ಅವಧಿ ಮುಕ್ತಾಯವಾಗಿರುವುದರಿಂದ ಆ ನಂತರದ ಅವಧಿಗೆ ಬಡ್ಡಿಕೊಡಲು ಬರುವುದಿಲ್ಲ ಅಂದಿದ್ದರು. ದೂರುದಾರನಿಗೆ 2015 ರವರೆಗಿನ ಹಣ ಮತ್ತು ನಂತರದ ಅವಧಿಯ ಅವರ ವಂತಿಗೆ ಹಣವನ್ನು ಮಾತ್ರ ಅವರಿಗೆ ವಾಪಸ್ಸು ಕೊಡಬಹುದು ಅಂತಾ ಅಂಚೆ ಇಲಾಖೆಯವರು ಆಕ್ಷೇಪಿಸಿದ್ದರು.ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ, ಸದಸ್ಯರಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಹಾಗೂ ಪ್ರಭು.ಸಿ.ಹಿರೇಮಠ ಅಂಚೆ ಇಲಾಖೆಯ ಎಲ್ಲ ಆಕ್ಷೇಪಣೆಗಳನ್ನು ತಳ್ಳಿಹಾಕಿ, 2015 ರ ನಂತರ ದೂರುದಾರರ ಹಣವನ್ನು ಜನರಲ್ ಪಿಪಿಎಫ್ ಯೋಜನೆಯಡಿ ಅಂಚೆ ಇಲಾಖೆಯವರು ಮುಂದುವರೆಸಿ ಆ ಹಣವನ್ನು ಬೇರೆಕಡೆ ವಿನಿಯೋಗಿಸಿ ಲಾಭ ಪಡೆದು ಈಗ ದೂರುದಾರನಿಗೆ ಬಡ್ಡಿಕೊಡಲು ನಿರಾಕರಿಸುತ್ತಿರುವುದು ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.


Spread the love

About Laxminews 24x7

Check Also

ದಯಮಾಡಿ ಬಂದ್​​ಗೆ ಸಹಕಾರ ನೀಡಿ ಸ್ವಾಮಿ- ಆಟೋ ಚಾಲಕನ ಕಾಲಿಗೆ ಬಿದ್ದ ರೈತ

Spread the loveಧಾರವಾಡ: ‘ಭಾರತ್ ಬಂದ್’ ಹಿನ್ನೆಲೆ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಸ್ ತೆಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾಕಾರರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ