Breaking News

ಬೆಳಗಾವಿ: ”ಸಾಹಿತ್ಯದಿಂದ ಸೈನಿಕರ ಸ್ಥೈರ್ಯ ಹೆಚ್ಚಳ’: ದಯಾಲನ್

Spread the love

ಬೆಳಗಾವಿ: ‘ದೇಶದ ಗಡಿ ಕಾಯುವ ಸೈನಿಕರಿಗೆ ಸಾಹಿತಿ ನೀಲಗಂಗಾ ಚರಂತಿಮಠ ಅವರಿ ತಮ್ಮ ಕೃತಿಗಳಲ್ಲಿ ದೊಡ್ಡ ಗೌರವ ನೀಡಿದ್ದಾರೆ. ಇಂಥ ಪುಸ್ತಕಗಳಿಂದ ಸೈನಿಕರ ನೈತಿಕ ಸ್ಥೈರ್ಯ ಹೆಚ್ಚುತ್ತದೆ’ ಎಂದು ಕಮಾಂಡೆಂಟ್‌ ಪಿ.ಸಿ. ವಿಂಗ್‌ನ ಬ್ರಿಗೇಡಿಯರ್ ದಯಾಲನ್ ಹೇಳಿದರು.

 

ಸಾಹಿತಿ ನೀಲಗಂಗಾ ಚರಂತಿಮಠ ಅವರ ‘ಧಾರಿಣಿ’, ‘ಜನನಿ ಜನ್ಮಭೂಮಿ’, ‘ಒಂದೇ ಮಾತರಂ’ ಮತ್ತು ‘ಪ್ರಣಾಮ್’ ಎಂಬ ನಾಲ್ಕು ಪುಸ್ತಕಗಳನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಸ್.ಎಂ. ಗಂಗಾಧರಯ್ಯ ಅವರು ಕೃತಿಗಳ ಪರಿಚಯಿಸಿದರು.

ಹಿರಿಯ ಸಾಹಿತಿ, ಚಿಂತಕ ಬಿ.ಎಸ್. ಗವಿಮಠ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರೊ.ಎಂ.ಎಸ್. ಇಂಚಲ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ದಯಾಲನ್, ಎಂ.ಎಸ್. ಇಂಚಲ, ಜಿಲ್ಲಾ ಲೇಖಕಿಯರ ಸಂಘದ
ಅಧ್ಯಕ್ಷೆ ಜಯಶೀಲಾ ಬ್ಯಾಕೋಡ, ಸುನಂದಾ ಎಮ್ಮಿ ಅವರನ್ನು ಸತ್ಕರಿಸಲಾಯಿತು.

ದೀಪಿಕಾ ಚಾಟೆ ಸ್ವಾಗತಿಸಿದರು. ಭಾರತಿ ಮಠದ ಮತ್ತು ರಾಜನಂದ ಗಾರ್ಗಿ ಅತಿಥಿಗಳ ಪರಿಚಯ ಮಾಡಿದರು. ನೈನಾ ಗಿರಿಗೌಡರ ರಾಷ್ಟ್ರಗೀತೆ, ನಾಡಗೀತೆ ಪ್ರಸ್ತುತಪಡಿಸಿದರು. ಪ್ರತಿಭಾ ಕಳ್ಳಿಮಠ ವಂದೇ ಮಾತರಂ ಪ್ರಸ್ತುತಪಡಿಸಿದರು


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ