Breaking News

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿಎಚ್ ಡಿ ಮಾಡಿದ್ದಾರೆ: ಸಿಎಂ ಬೊಮ್ಮಾಯಿ

Spread the love

ಬೆಳಗಾವಿ: ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದವರೇ ಕಾಂಗ್ರೆಸ್ ನವರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ನ ಎಲ್ಲ ನಾಯಕರು ಪಿ ಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣದ ಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ ಅತಿಕ್ರಮಣ ಬರುವುದಕ್ಕೆ ರಾಜಕಾಲುವೆ ಮುಚ್ಚುವದಕ್ಕೆ ಮತ್ತು ರಾಜಕಾಲುವೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿರುವದಕ್ಕೆ ಕಾಂಗ್ರೆಸ್ ಕಾರಣ.

ಹತ್ತು ಹಲವು ಭ್ರಷ್ಟಾಚಾರ ಅವರ ಕಾಲದಲ್ಲಿ ನಡೆದಿವೆ. ಈಗ ಅವುಗಳನ್ನು ಮುಚ್ಚಿಹಾಕಲು ಈ ರೀತಿಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಅವಿಭಾಜ್ಯಗಳನ್ನು ಅಂಗ. ಸಂವಿಧಾನಾತ್ಮಕ ವಾಗಿ ರಚನೆಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಭ್ರಷ್ಟಾಚಾರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಇದ್ದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ಎ ಸಿ ಬಿ ಗೆ ಕೊಟ್ಟು ಮುಚ್ಚಿಹಾಕಿದರು ಎಂದು ಟೀಕಿಸಿದ ಮುಖ್ಯಮಂತ್ರಿಗಳು ಈಗ ಮತ್ತೆ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಮರು ಶಿಫಾರಸ್ಸು ಮಾಡುತ್ತಿದ್ದೇವೆ ಎಂದರು.


Spread the love

About Laxminews 24x7

Check Also

ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ

Spread the loveಗೋಕಾಕ : ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ