Home / ರಾಜಕೀಯ / ಕೊಲಿಜಿಯಂನಲ್ಲಿ ಸರ್ಕಾರದ ಹಸ್ತಕ್ಷೇಪ ದುರುದ್ದೇಶಪೂರಿತ: ನ್ಯಾ. ಸಂತೋಷ್ ಹೆಗ್ಡೆ

ಕೊಲಿಜಿಯಂನಲ್ಲಿ ಸರ್ಕಾರದ ಹಸ್ತಕ್ಷೇಪ ದುರುದ್ದೇಶಪೂರಿತ: ನ್ಯಾ. ಸಂತೋಷ್ ಹೆಗ್ಡೆ

Spread the love

ಮೈಸೂರು: ‘ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ ‘ಕೊಲಿಜಿಯಂ’ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವಿನಲ್ಲಿ ದುರುದ್ದೇಶವಿದೆ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.

 

‘ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕವೇ ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ’ ಎಂದು ಮಂಗಳವಾರ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು.

‘ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ ಸ್ವಾಯತ್ತತೆಗೆ ಧಕ್ಕೆ ತರುವಂಥದ್ದು’ ಎಂದು ಅಭಿ ಪ್ರಾಯಪಟ್ಟರು.

‘ಕೊಲಿಜಿಯಂ ಶಿಫಾರಸ್ಸು ಮಾಡಿದ ನ್ಯಾಯಮೂರ್ತಿಗಳ ವೈಯಕ್ತಿಕ ವಿಚಾರಗಳನ್ನು ಪರಿಗಣಿಸಿ ಕೇಂದ್ರ ನಿರಾಕರಿಸಿರುವುದು ತಪ್ಪು. ಒಬ್ಬ ಮನುಷ್ಯನ ವೈಯಕ್ತಿಕ ಜೀವನವನ್ನು ಆಡಳಿತ ದೃಷ್ಟಿಯಲ್ಲಿ ನೋಡಲಾಗದು. ಪ್ರಚಂಡ ಬಹುಮತವುಳ್ಳ ಸರ್ಕಾರದ ತಪ್ಪು ನಿರ್ಧಾರಗಳನ್ನು ಪ್ರಶ್ನಿಸಲು, ಸಂವಿಧಾನವನ್ನು ಎತ್ತಿಹಿಡಿಯಲು ನ್ಯಾಯಾಂಗಕ್ಕೆ ತನ್ನದೇ ಆಯ್ಕೆ ಪ್ರಕ್ರಿಯೆ ಮುಖ್ಯ’ ಎಂದರು.

‘ಸಚಿವರನ್ನು ನೇಮಿಸಿಕೊಳ್ಳುವ ಪ್ರಧಾನಿಯನ್ನು ಯಾರಾದರೂ ಪ್ರಶ್ನಿಸುತ್ತಾರೆಯೇ? ಆದರೆ, ಕೊಲಿಜಿಯಂನಲ್ಲಿ ನ್ಯಾಯಾಧೀಶರ ಗುಂಪು ಬಹುಮತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಅಷ್ಟರಮಟ್ಟಿಗೆ ಅದು ಪಾರದರ್ಶಕ ಹಾಗೂ ಉತ್ತಮ ವ್ಯವಸ್ಥೆ’ ಎಂದು ಹೇಳಿದರು


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ