Breaking News

ವಸತಿ ಯೋಜನೆಗೆ ನೀಡಿದ್ದ ₹ 300 ಕೋಟಿ ವಾಪಸ್

Spread the love

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದಲ್ಲಿನ (ಎಸ್‌ಟಿ) ಅಲೆಮಾರಿ ಸಮುದಾಯಗಳ ಜನರ ವಸತಿ ಯೋಜನೆಗೆ ಮೀಸಲಿಟ್ಟಿದ್ದ ₹ 300 ಕೋಟಿ ಅನುದಾನವನ್ನು ಇತರ ವಸತಿ ಯೋಜನೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದೇ ಯೋಜನೆಯಡಿ 2021- 22ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹ 250 ಕೋಟಿಯನ್ನು ಈ ಹಿಂದೆಯೂ ಸರ್ಕಾರ ವಾಪಸ್ ಪಡೆದಿತ್ತು.

ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಆದ್ಯತೆ ಮೇರೆಗೆ ಮನೆ ನಿರ್ಮಿಸಿ ಕೊಡುವುದಾಗಿ 2022-23ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಬಜೆಟ್‌ ಘೋಷಣೆಯಂತೆ ₹ 300 ಕೋಟಿ ಅನುದಾನ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ 2022 ಏಪ್ರಿಲ್‌ 18ರಂದು ಆದೇಶ ಹೊರಡಿಸಿತ್ತು.

ರಾಜೀವ್ ಗಾಂಧಿ ವಸತಿ ಯೋಜನೆಯಡಿ ₹ 2 ಲಕ್ಷ ಘಟಕ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅದರ ಜತೆಗೆ ಹೆಚ್ಚುವರಿಯಾಗಿ ₹ 2 ಲಕ್ಷ ನೀಡಿ ಒಟ್ಟು ₹ 4 ಲಕ್ಷ ಘಟಕ ವೆಚ್ಚದಲ್ಲಿ ಮನೆ ನಿರ್ಮಿಸಲು ₹ 300 ಕೋಟಿ ಮೀಸಲಿಡಲಾಗಿತ್ತು. ಈ ಸಂಬಂಧ ಮನೆ ಮಂಜೂರಾತಿ ಮತ್ತು ಆದೇಶ ಪತ್ರಗಳನ್ನೂ ಶಿವಮೊಗ್ಗದಲ್ಲಿ ಸೆ. 3ರಂದು ಸಾಂಕೇತಿಕವಾಗಿ ಸರ್ಕಾರ ವಿತರಣೆ ಮಾಡಿತ್ತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ